ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ ಈ ಚಿತ್ರವು ಈಗಾಗಲೇ ಆರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನ ಕಂಡಿದೆ.ಕವಿ ಜನ್ನನಿಂದ ರಚಿತವಾದ ‘ಯಶೋಧರ ಚರಿತೆ’ ಕಾವ್ಯವನ್ನು ಈ ಚಿತ್ರ ಆಧರಿಸಿದೆ. ಈ ಕಾವ್ಯದಲ್ಲಿ ಬರುವ ಅಮೃತಮತಿ ಪ್ರಸಂಗವನ್ನು ಮರುಸೃಷ್ಟಿಸಿ, ಮರು ವ್ಯಾಖ್ಯಾನಕ್ಕೆ ಒಳಪಡಿಸಿದ್ದಾರೆ ಬರಗೂರು.ರಾಜ್ಯದ ಚಿತ್ರ ಮಂದಿರಗಳಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸಿದೆ.