ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ಬೆಳಗ್ಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ‘ಅಧ್ಯಕ್ಷ’, ‘ರನ್ನ’, ‘ಪೊಗರು’ನಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ ನಂದ ಕಿಶೋರ್ ಈ ಹೊಸ ಚಿತ್ರ ‘ರಾಣ’ವನ್ನು ನಿರ್ದೇಶಿಸುತ್ತಿದ್ದಾರೆ.