ಚಿತ್ರದಲ್ಲಿ ‘ಭಾರ್ಗವ್ ಭಕ್ಷಿ’ ಎಂಬ ವಿಶೇಷ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡಕ್ಕೆ ಇತ್ತೀಚೆಗಷ್ಟೇ ಬಾಲಿವುಡ್ನ ಖ್ಯಾತ ನಟ ನವಾಬ್ ಶಾ ಪ್ರವೇಶಿಸಿದ್ದರು. ತಮಿಳಿನ ಐ ಚಿತ್ರದ ಖ್ಯಾತಿಯ ಕಾಮರಾಜನ್, ಜಗಪತಿ ಬಾಬು, ರಾಹುಲ್ ದೇವ್, ಸುನಿಲ್ ಪುರಾಣಿಕ್, ಪ್ರಮೋದ್ ಶೆಟ್ಟಿ,ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಮಿನರ್ವ ಮಿಲ್ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ಮುಗಿಸಿ, ಚಿತ್ರತಂಡವು ಹೈದರಾಬಾದ್ ಮತ್ತು ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಿದೆ.