<p>ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಹೊಂದಿರುವ ‘ಲಾಕ್ಡೌನ್’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಜಾವೇದ್ ತಿಪ್ಪನಹಟ್ಟಿ ಸಿನಿಮಾಕ್ಕೆ ಚಿತ್ರಕಥೆ ಬರೆದು, ನಿರ್ದೇಶನ ಮಾಡಿದ್ದಾರೆ.</p>.<p>‘ಲಾಕ್ಡೌನ್’ ಪದ ಕೇಳಿದರೆ ಹಲವರಿಗೆ ಈಗಲೂ ಭಯವಾಗುತ್ತದೆ.ಈ ಅವಧಿ ಕೆಲವರಿಗೆ ಖುಷಿ ತಂದುಕೊಟ್ಟಿದೆ. ಹೀಗಾಗಿಯೇ ಚಿತ್ರಕ್ಕೆ ವಿಷಾದ ಆ್ಯಂಡ್ ರಂಜನೆ ಎಂಬ ಅಡಿಬರಹವಿದೆ. ಬಳ್ಳಾರಿಯಲ್ಲಿ ನಡೆದ ಒಂದಷ್ಟು ಕಹಿಘಟನೆಗಳನ್ನು ಇಟ್ಟುಕೊಂಡು ಚಿತ್ರ ಸಿದ್ಧಗೊಂಡಿದೆ. ಜತೆಗೆ ಯುವ ಪ್ರೇಮಿಗಳು ಹಾಗೂ ಮಧ್ಯವಯಸ್ಕ ದಂಪತಿಯ ಹಾಸ್ಯ ಸನ್ನಿವೇಶಗಳಿವೆ. ಅಂದುಕೊಂಡಂತೆ ಆದರೆ ಇದೇ ತಿಂಗಳು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.</p>.<p>ಅಭಿನವ ಪ್ರೊಡಕ್ಷನ್ ಅಡಿಯಲ್ಲಿ ಮಂಜು ಮುದ್ಗಲ್ ಚಿತ್ರ ನಿರ್ಮಾಣ ಮಾಡುವ ಜತೆಗೆ, ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವಿಜಯ್ ವಿಘ್ನೇಶ್ ನಾಯಕ. ದಾವಣಗೆರೆಯ ವಾಣಿಶ್ರೀ ಶ್ರೀನಿವಾಸ್ ನಾಯಕಿ. ಇವರೊಂದಿಗೆ ಶ್ರಾವಣಿ, ಅಶ್ವಿನಿ ಮುದ್ಗಲ್, ಮಮತಾ, ಗೋವಿಂದರಾಜು-ವೈಲಾ ಮುಂತಾದವರು ನಟಿಸಿದ್ದಾರೆ. ನಿರ್ದೇಶಕರೇ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಶರಣಪ್ಪ ಸುಗ್ಗನಹಳ್ಳಿ ಛಾಯಾಚಿತ್ರಗ್ರಹಣ, ಶಿವರಾಜ್ ಮೆಹೂ ಸಂಕಲನ ಚಿತ್ರಕ್ಕಿದೆ.</p>.<p>‘ಅಭಿನಯಕ್ಕಾಗಿ ಅವಕಾಶ ಕೇಳಿಕೊಂಡು ಎಲ್ಲರ ಬಳಿ ಹೋಗುತ್ತಿದ್ದೆ. ಸರಿಯಾದ ಅವಕಾಶ ಸಿಗಲಿಲ್ಲ. ಆಗ ನಾನೇ ಒಂದು ಸಿನಿಮಾ ನಿರ್ಮಾಣ ಮಾಡುವೆ ಎಂದು ಹೊರಟೆ. ಇಂದು ಸಿನಿಮಾ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು ನಿರ್ಮಾಪಕ.</p>.<p>ಕೊಪ್ಪಳ, ಉಪ್ಪಿನ ಬೆಟಗೇರಿ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-540541952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಹೊಂದಿರುವ ‘ಲಾಕ್ಡೌನ್’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಜಾವೇದ್ ತಿಪ್ಪನಹಟ್ಟಿ ಸಿನಿಮಾಕ್ಕೆ ಚಿತ್ರಕಥೆ ಬರೆದು, ನಿರ್ದೇಶನ ಮಾಡಿದ್ದಾರೆ.</p>.<p>‘ಲಾಕ್ಡೌನ್’ ಪದ ಕೇಳಿದರೆ ಹಲವರಿಗೆ ಈಗಲೂ ಭಯವಾಗುತ್ತದೆ.ಈ ಅವಧಿ ಕೆಲವರಿಗೆ ಖುಷಿ ತಂದುಕೊಟ್ಟಿದೆ. ಹೀಗಾಗಿಯೇ ಚಿತ್ರಕ್ಕೆ ವಿಷಾದ ಆ್ಯಂಡ್ ರಂಜನೆ ಎಂಬ ಅಡಿಬರಹವಿದೆ. ಬಳ್ಳಾರಿಯಲ್ಲಿ ನಡೆದ ಒಂದಷ್ಟು ಕಹಿಘಟನೆಗಳನ್ನು ಇಟ್ಟುಕೊಂಡು ಚಿತ್ರ ಸಿದ್ಧಗೊಂಡಿದೆ. ಜತೆಗೆ ಯುವ ಪ್ರೇಮಿಗಳು ಹಾಗೂ ಮಧ್ಯವಯಸ್ಕ ದಂಪತಿಯ ಹಾಸ್ಯ ಸನ್ನಿವೇಶಗಳಿವೆ. ಅಂದುಕೊಂಡಂತೆ ಆದರೆ ಇದೇ ತಿಂಗಳು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.</p>.<p>ಅಭಿನವ ಪ್ರೊಡಕ್ಷನ್ ಅಡಿಯಲ್ಲಿ ಮಂಜು ಮುದ್ಗಲ್ ಚಿತ್ರ ನಿರ್ಮಾಣ ಮಾಡುವ ಜತೆಗೆ, ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವಿಜಯ್ ವಿಘ್ನೇಶ್ ನಾಯಕ. ದಾವಣಗೆರೆಯ ವಾಣಿಶ್ರೀ ಶ್ರೀನಿವಾಸ್ ನಾಯಕಿ. ಇವರೊಂದಿಗೆ ಶ್ರಾವಣಿ, ಅಶ್ವಿನಿ ಮುದ್ಗಲ್, ಮಮತಾ, ಗೋವಿಂದರಾಜು-ವೈಲಾ ಮುಂತಾದವರು ನಟಿಸಿದ್ದಾರೆ. ನಿರ್ದೇಶಕರೇ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಶರಣಪ್ಪ ಸುಗ್ಗನಹಳ್ಳಿ ಛಾಯಾಚಿತ್ರಗ್ರಹಣ, ಶಿವರಾಜ್ ಮೆಹೂ ಸಂಕಲನ ಚಿತ್ರಕ್ಕಿದೆ.</p>.<p>‘ಅಭಿನಯಕ್ಕಾಗಿ ಅವಕಾಶ ಕೇಳಿಕೊಂಡು ಎಲ್ಲರ ಬಳಿ ಹೋಗುತ್ತಿದ್ದೆ. ಸರಿಯಾದ ಅವಕಾಶ ಸಿಗಲಿಲ್ಲ. ಆಗ ನಾನೇ ಒಂದು ಸಿನಿಮಾ ನಿರ್ಮಾಣ ಮಾಡುವೆ ಎಂದು ಹೊರಟೆ. ಇಂದು ಸಿನಿಮಾ ಬಿಡುಗಡೆ ಹಂತಕ್ಕೆ ಬಂದಿದೆ’ ಎಂದರು ನಿರ್ಮಾಪಕ.</p>.<p>ಕೊಪ್ಪಳ, ಉಪ್ಪಿನ ಬೆಟಗೇರಿ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-540541952</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>