‘ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾದ ಮೂರ್ನಾಲ್ಕು ದಿನ ಹೌಸ್ಫುಲ್ ಇರುತ್ತದೆ. ನಂತರದ ದಿನಗಳಲ್ಲಿ ಶೇ 40–60ರವರೆಗೆ ಮಾತ್ರ ಪ್ರೇಕ್ಷಕರ ಸಂಖ್ಯೆ ಇರುತ್ತದೆ. ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧ ಮಾಡಿದರೆ ಜನರು ಭಯ ಬೀಳುತ್ತಾರೆ. ಈ ನಿರ್ಬಂಧವನ್ನು ತೆಗೆಯಲು ಮನವಿ ಮಾಡಿದ್ದೇವೆ. ಚಿತ್ರರಂಗ ಸಂಕಷ್ಟದಲ್ಲಿದೆ. ನಿರ್ಬಂಧ ಹಾಕಿದರೆ ಬಾಡಿಗೆ ಕಟ್ಟಲು, ವಿದ್ಯುತ್ ಬಿಲ್ ಪಾವತಿಸಲೂ ಕಷ್ಟವಾಗಲಿದೆ. ನಿರ್ಮಾಪಕರು ಬದುಕಲು ಸಾಧ್ಯವಿಲ್ಲ. ಕೋವಿಡ್ ನಿಯಂತ್ರಣ ಎಲ್ಲರ ಕರ್ತವ್ಯ. ಇದಕ್ಕೆ ನಾವು ಸಹಕರಿಸುತ್ತೇವೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದು, ಕಾದು ನೋಡುತ್ತೇವೆ’ ಎಂದು ನಿರ್ಮಾಪಕ ಕೆ.ಮಂಜು ಹೇಳಿದರು.