ಬೆಂಗಳೂರು: ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಅವರ ಪತ್ನಿ ಮಂಗಳಾ, ಮಗ ಯುವ ರಾಜ್ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಪ್ರೀತಿಯ ಅಪ್ಪುಗೆ ಅಂತಿಮ ನಮನ ಸಲ್ಲಿಸಿದರು.
ಪಲ್ಲಕ್ಕಿಯಲ್ಲಿ ತಣ್ಣಗೆ ಮಲಗಿದ್ದ ಪುನೀತ್ಗೆ ಪೂಜೆ ಮಾಡುವ ವೇಳೆ ಮಡುಗಟ್ಟಿದ ದುಃಖ ಉಮ್ಮಳಿಸಿ ಬರುತ್ತಿತ್ತು.
ಪುನೀತ್ ಪತ್ನಿ ಅಶ್ವಿನಿ ಪುತ್ರಿಯರಿಬ್ಬರ ಕೈಗಳನ್ನು ಬಿಗಿಯಾಗಿ ಹಿಡಿದು ಧೈರ್ಯ ತುಂಬುತ್ತಿದ್ದರು.
ನಟರಾದ ಉಪೇಂದ್ರ, ರವಿಚಂದ್ರನ್, ಯಶ್, ಜಗ್ಗೇಶ್, ಡಾಲಿ ಧನಂಜಯ, ದುನಿಯಾ ವಿಜಯ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ಅಶೋಕ, ಆರಗ ಜ್ಞಾನೇಂದ್ರ ಇದ್ದರು.