<p>ನಾಗಭೂಷಣ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ‘ಟಗರುಪಲ್ಯ’ ಸಿನಿಮಾದ ನಿರ್ದೇಶಕ ಉಮೇಶ್ ಕೆ.ಕೃಪ ನಿರ್ದೇಶನದ ಎರಡನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ.</p>.<p>ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಸದ್ಯ ‘ಪ್ರೊಡಕ್ಷನ್ ನಂ 2’ ಎಂಬ ಶೀರ್ಷಿಕೆ ಇಡಲಾಗಿದೆ.</p>.<p>‘ಇದು ನನ್ನ ನಿರ್ದೇಶನದ ಎರಡನೇ ಸಿನಿಮಾ’ ಎಂದು ಮಾತು ಆರಂಭಿಸಿದ ಉಮೇಶ್, ‘ಟಗರುಪಲ್ಯ ಚಿತ್ರಕ್ಕೆ ಸಿಕ್ಕ ಪ್ರೀತಿ, ಪ್ರೋತ್ಸಾಹಕ್ಕೆ ಧನ್ಯವಾದ. ಈ ಹೊಸ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಎಸ್.ಕೆ.ರಾವ್ ಛಾಯಾಚಿತ್ರಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ.ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ’ ಎಂದರು.</p>.<p>‘ಈ ಚಿತ್ರಕ್ಕೆ ಕಥೆಯೇ ನಾಯಕ. ನನ್ನ ಹಿಂದಿನ ಚಿತ್ರದಂತೆ ಈ ಚಿತ್ರದಲ್ಲೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರಲಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ‘ಕಂಠಿ’ ಪಾತ್ರದ ಮೂಲಕ ಪರಿಚಿತರಾಗಿರುವ ಧನುಷ್ ಹಾಗೂ ಕೆಲವು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿರುವ ಮನಸ್ವಿ ಈ ಸಿನಿಮಾದ ಮುಖ್ಯಭೂಮಿಕೆಯಲ್ಲಿದ್ದಾರೆ. ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ. ಇದೊಂದು ನಾಡಿನ ಕಥೆ. ಪ್ರೀತಿ, ಹಾಸ್ಯ, ಭಾವನಾತ್ಮಕ ದೃಶ್ಯಗಳು–ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಮನರಂಜನೆಯೇ ಪ್ರಧಾನವಾದ ಕೌಟುಂಬಿಕ ಚಿತ್ರವಿದು. ಈ ಚಿತ್ರದಲ್ಲಿ ಮಳೆ ಮುಖ್ಯ ಪಾತ್ರವಹಿಸುತ್ತದೆ. ಹೀಗಾಗಿ ಚಿತ್ರೀಕರಣಕ್ಕೆ ಮಳೆಗಾಲಕ್ಕಾಗಿ ಕಾಯುತ್ತಿದ್ದೆವು. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ತೀರ್ಥಹಳ್ಳಿ, ಆಗುಂಬೆ, ಕಾರ್ಕಳ, ಚಿಕ್ಕಮಗಳೂರು ಮುಂತಾದ ಕಡೆ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ’ ಎಂದರು ಉಮೇಶ್. v</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-851139570</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಭೂಷಣ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ‘ಟಗರುಪಲ್ಯ’ ಸಿನಿಮಾದ ನಿರ್ದೇಶಕ ಉಮೇಶ್ ಕೆ.ಕೃಪ ನಿರ್ದೇಶನದ ಎರಡನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ.</p>.<p>ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಸದ್ಯ ‘ಪ್ರೊಡಕ್ಷನ್ ನಂ 2’ ಎಂಬ ಶೀರ್ಷಿಕೆ ಇಡಲಾಗಿದೆ.</p>.<p>‘ಇದು ನನ್ನ ನಿರ್ದೇಶನದ ಎರಡನೇ ಸಿನಿಮಾ’ ಎಂದು ಮಾತು ಆರಂಭಿಸಿದ ಉಮೇಶ್, ‘ಟಗರುಪಲ್ಯ ಚಿತ್ರಕ್ಕೆ ಸಿಕ್ಕ ಪ್ರೀತಿ, ಪ್ರೋತ್ಸಾಹಕ್ಕೆ ಧನ್ಯವಾದ. ಈ ಹೊಸ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಎಸ್.ಕೆ.ರಾವ್ ಛಾಯಾಚಿತ್ರಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ.ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ’ ಎಂದರು.</p>.<p>‘ಈ ಚಿತ್ರಕ್ಕೆ ಕಥೆಯೇ ನಾಯಕ. ನನ್ನ ಹಿಂದಿನ ಚಿತ್ರದಂತೆ ಈ ಚಿತ್ರದಲ್ಲೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರಲಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ‘ಕಂಠಿ’ ಪಾತ್ರದ ಮೂಲಕ ಪರಿಚಿತರಾಗಿರುವ ಧನುಷ್ ಹಾಗೂ ಕೆಲವು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿರುವ ಮನಸ್ವಿ ಈ ಸಿನಿಮಾದ ಮುಖ್ಯಭೂಮಿಕೆಯಲ್ಲಿದ್ದಾರೆ. ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ. ಇದೊಂದು ನಾಡಿನ ಕಥೆ. ಪ್ರೀತಿ, ಹಾಸ್ಯ, ಭಾವನಾತ್ಮಕ ದೃಶ್ಯಗಳು–ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಮನರಂಜನೆಯೇ ಪ್ರಧಾನವಾದ ಕೌಟುಂಬಿಕ ಚಿತ್ರವಿದು. ಈ ಚಿತ್ರದಲ್ಲಿ ಮಳೆ ಮುಖ್ಯ ಪಾತ್ರವಹಿಸುತ್ತದೆ. ಹೀಗಾಗಿ ಚಿತ್ರೀಕರಣಕ್ಕೆ ಮಳೆಗಾಲಕ್ಕಾಗಿ ಕಾಯುತ್ತಿದ್ದೆವು. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ತೀರ್ಥಹಳ್ಳಿ, ಆಗುಂಬೆ, ಕಾರ್ಕಳ, ಚಿಕ್ಕಮಗಳೂರು ಮುಂತಾದ ಕಡೆ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ’ ಎಂದರು ಉಮೇಶ್. v</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-851139570</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>