ಕೀರ್ತಿಕೃಷ್ಣ ನಾಯಕ. ನಿಖಿತಾಸ್ವಾಮಿ ಮತ್ತು ಮಧುಬಾಲ ನಾಯಕಿಯರು. ಇವರೊಂದಿಗೆ ಬಾಲಿವುಡ್ ನಟರಾದ ಪ್ರದೀಪ್ರಾವುತ್, ಶಾಹುರಾಜ್ ಶಿಂದೆ ಹಾಗೂ ಮಗಧೀರ ಖ್ಯಾತಿಯ ದೇವ್ಗಿಲ್ ಹಾಗೂ ಕನಕಪುರದ ಸ್ಥಳೀಯ ಕಲಾವಿದರು ಇದ್ದಾರೆ. ಬೆಂಗಳೂರು, ಮಂಗಳೂರು, ಕನಕಪುರ, ಪಾವಗಡ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಪುಷ್ಪ ಫಿಲಂಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸದ್ಯದಲ್ಲೆ ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದಿದೆ ಚಿತ್ರತಂಡ.