<p>ಫ್ಯಾಂಟಸಿ ಕತೆ ಹೊಂದಿದ್ದ ತೆಲುಗಿನ ‘ಹನುಮಾನ್’ ಚಿತ್ರ ಸೂಪರ್ ಹಿಟ್ ಆಗಿತ್ತು. ಇದೀಗ ಕನ್ನಡದಲ್ಲಿಯೂ ಅಂಥದ್ದೇ ಒಂದು ಚಿತ್ರ ಸೆಟ್ಟೇರಿದೆ. ಹನುಮಂತನ ಸಾಹಸಗಾಥೆಯನ್ನು ಹೊಂದಿರುವ ‘ಗದಾಧಾರಿ ಹನುಮಾನ್ ’ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. </p>.<p>ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಈ ಚಿತ್ರಕ್ಕೆ ರೋಹಿತ್ ಕೊಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿರಭ್ ಸ್ಟುಡಿಯೋಸ್ ಬ್ಯಾನರ್ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ.</p>.<p>‘ಹಲವು ಯುಗಗಳಲ್ಲಿ ವಿವಿಧ ರಾಕ್ಷಸರನ್ನು ಸಂಹಾರ ಮಾಡಲಾಗಿದೆ. ಆದರೆ ರಾಕ್ಷಸ ಶಕ್ತಿ ಜೀವಂತವಾಗಿದ್ದು, ಸಾಮಾನ್ಯ ಮನುಷ್ಯನೊಬ್ಬ ಅದನ್ನು ಸದೆಬಡಿಯುವ ಕತೆ ಇದೆ. ಒಟ್ಟಾರೆ ಸಿನಿಮಾವು ಸಾಹಸ, ಡ್ರಾಮಾ, ಹಾರರ್, ಥ್ರಿಲ್ಲರ್, ಕಾಮಿಡಿ ಹಾಗೂ ದೈವತ್ವದ ಸನ್ನಿವೇಶಗಳನ್ನು ಹೊಂದಿದೆ’ ಎಂದರು ನಿರ್ದೇಶಕರು.</p>.<p>‘ತಾರಕಾಸುರ’ ಖ್ಯಾತಿಯ ರವಿ ಈ ಚಿತ್ರದ ನಾಯಕ. ಹೊಸ ಪ್ರತಿಭೆ ಹರ್ಷಿತಾ ನಾಯಕಿ. ಕಲ್ಯಾಣ್ ಕೃಷ್ಣ, ರಮೇಶ್ ಪಂಡಿತ್, ಸುನಂದ ಕಲ್ಬುರ್ಗಿ, ನಾಗೇಶ್ ಮಯ್ಯ ಮುಂತಾದವರು ನಟಿಸುತ್ತಿದ್ದಾರೆ.</p>.<p>ಜ್ಯೂಡಾ ಸ್ಯಾಂಡಿ ಸಂಗೀತ, ಅರುಣ್ ಗೌಡ ಛಾಯಾಚಿತ್ರಗ್ರಹಣ , ಸಿ.ಎನ್.ಕಿಶೋರ್ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಚಿತ್ರದುರ್ಗ, ಗಂಗಾವತಿ, ಹಂಪಿ, ಅಂಜನಾದ್ರಿಬೆಟ್ಟ, ಕಿತ್ತೂರು ಮೊದಲಾದೆಡೆ ನಾಲ್ಕು ಹಂತಗಳಲ್ಲಿ ಚಿತ್ರೀಕರಣಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಫ್ಯಾಂಟಸಿ ಕತೆ ಹೊಂದಿದ್ದ ತೆಲುಗಿನ ‘ಹನುಮಾನ್’ ಚಿತ್ರ ಸೂಪರ್ ಹಿಟ್ ಆಗಿತ್ತು. ಇದೀಗ ಕನ್ನಡದಲ್ಲಿಯೂ ಅಂಥದ್ದೇ ಒಂದು ಚಿತ್ರ ಸೆಟ್ಟೇರಿದೆ. ಹನುಮಂತನ ಸಾಹಸಗಾಥೆಯನ್ನು ಹೊಂದಿರುವ ‘ಗದಾಧಾರಿ ಹನುಮಾನ್ ’ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. </p>.<p>ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಈ ಚಿತ್ರಕ್ಕೆ ರೋಹಿತ್ ಕೊಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿರಭ್ ಸ್ಟುಡಿಯೋಸ್ ಬ್ಯಾನರ್ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ.</p>.<p>‘ಹಲವು ಯುಗಗಳಲ್ಲಿ ವಿವಿಧ ರಾಕ್ಷಸರನ್ನು ಸಂಹಾರ ಮಾಡಲಾಗಿದೆ. ಆದರೆ ರಾಕ್ಷಸ ಶಕ್ತಿ ಜೀವಂತವಾಗಿದ್ದು, ಸಾಮಾನ್ಯ ಮನುಷ್ಯನೊಬ್ಬ ಅದನ್ನು ಸದೆಬಡಿಯುವ ಕತೆ ಇದೆ. ಒಟ್ಟಾರೆ ಸಿನಿಮಾವು ಸಾಹಸ, ಡ್ರಾಮಾ, ಹಾರರ್, ಥ್ರಿಲ್ಲರ್, ಕಾಮಿಡಿ ಹಾಗೂ ದೈವತ್ವದ ಸನ್ನಿವೇಶಗಳನ್ನು ಹೊಂದಿದೆ’ ಎಂದರು ನಿರ್ದೇಶಕರು.</p>.<p>‘ತಾರಕಾಸುರ’ ಖ್ಯಾತಿಯ ರವಿ ಈ ಚಿತ್ರದ ನಾಯಕ. ಹೊಸ ಪ್ರತಿಭೆ ಹರ್ಷಿತಾ ನಾಯಕಿ. ಕಲ್ಯಾಣ್ ಕೃಷ್ಣ, ರಮೇಶ್ ಪಂಡಿತ್, ಸುನಂದ ಕಲ್ಬುರ್ಗಿ, ನಾಗೇಶ್ ಮಯ್ಯ ಮುಂತಾದವರು ನಟಿಸುತ್ತಿದ್ದಾರೆ.</p>.<p>ಜ್ಯೂಡಾ ಸ್ಯಾಂಡಿ ಸಂಗೀತ, ಅರುಣ್ ಗೌಡ ಛಾಯಾಚಿತ್ರಗ್ರಹಣ , ಸಿ.ಎನ್.ಕಿಶೋರ್ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಚಿತ್ರದುರ್ಗ, ಗಂಗಾವತಿ, ಹಂಪಿ, ಅಂಜನಾದ್ರಿಬೆಟ್ಟ, ಕಿತ್ತೂರು ಮೊದಲಾದೆಡೆ ನಾಲ್ಕು ಹಂತಗಳಲ್ಲಿ ಚಿತ್ರೀಕರಣಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>