ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪರ ಆಡಳಿತ ನೀಡಿದ ಕಾಂಗ್ರೆಸ್‌

ಬೂತ್, ಘಟಕಗಳ ಅಧ್ಯಕ್ಷರ ಸಭೆ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌
Last Updated 19 ಜೂನ್ 2018, 8:59 IST
ಅಕ್ಷರ ಗಾತ್ರ

ಉಡುಪಿ: ‘ಕಳೆದ 5 ವರ್ಷಗಳಲ್ಲಿ ಕಾಂಗ್ರೆಸ್‌ ಜನರಿಗೆ ಉತ್ತಮವಾದ ಆಡಳಿತವನ್ನು ನೀಡಿದೆ. ಈ ಅವಧಿಯಲ್ಲಿ ಯಾವುದೇ ಭ್ರಷ್ಟಚಾರಕ್ಕೆ ಅವಕಾಶ ನೀಡಿಲ್ಲ’ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಬ್ರಹ್ಮಗಿರಿಯಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ನಗರಸಭಾ ವ್ಯಾಪ್ತಿಯ ಕಾರ್ಯಕರ್ತರ ಹಾಗೂ 35 ವಾರ್ಡ್‌ಗಳ ಬೂತ್, ಘಟಕಗಳ ಅಧ್ಯಕ್ಷರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರಸಭಾ ವ್ಯಾಪ್ತಿಯ ಪ್ರದೇಶಗಳು ಸಾಕಷ್ಟು ಅಭಿವೃದ್ಧಿಯಾಗಿವೆ. ಜನಪರ ಕಾಳಜಿಯೊಂದಿಗೆ ಸ್ವಚ್ಚ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ನಗರಸಭಾ ಚುನಾವಣೆಯಲ್ಲಿ ಜನರು ಮತ ನೀಡುವುದರಲ್ಲಿ ಸಂಶಯವಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಮಾತನಾಡಿ, ‘ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌ ವಿರುದ್ಧ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಬಿತ್ತರಿಸುವ ಬಿಜೆಪಿ ದ್ವೇಷದ ಹಾಗೂ ಷಡ್ಯಂತ್ರವನ್ನು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಅವರು ಹೇಳಿದರು.

ಸತ್ಯ, ಧರ್ಮದಿಂದ ನಡೆದಾಗ ಮಾತ್ರ ಗೆಲುವು ಶಾಶ್ವತವಾಗುತ್ತದೆ. ಸುಳ್ಳು ಸುದ್ದಿ ಹರಡುವುದೇ ಬಿಜೆಪಿಯ ಸಾಧನೆ ಎಂದರು. ಬ್ಲಾಕ್ ಅಧ್ಯಕ್ಷ ಸತೀಶ್ ಅಮಿನ್‌ ಪಡುಕರೆ ಮಾತನಾಡಿ, ನಗರಸಭೆ ಚುನಾವಣೆಗೆ ಮೀಸಲಾತಿ ಕರಡು ಪಟ್ಟಿ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಸಾರ್ವಜನಿಕರಿಂದ ಆಕ್ಷೇಪಗಳಿದ್ದರೆ ಕೂಡಲೇ ಜಿಲ್ಲಾಧಿಕಾರಿಗೆ ಲಿಖಿತವಾಗಿ ಸಲ್ಲಿಸಬಹುದು. ಶೀಘ್ರ ನಗರಸಭಾ ಚುನಾವಣಾ ಪ್ರಣಾಳಿಕೆ ರಚಿಸಲಾಗುತ್ತದೆ ಎಂದು ಅವರು ಸಭೆಯಲ್ಲಿ ಹೇಳಿದರು.

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್‌ರಾಜ್, ಹಾರ್ಮಿಸ್ ನೊರೋಹ್ನ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸದಾಶಿವ ಕಟ್ಟೆಗುಡ್ಡೆ, ಕೆ. ಕೃಷ್ಣಮೂರ್ತಿ, ಅಣ್ಣಯ್ಯ ಸೇರಿಗಾರ್, ಜ್ಯೋತಿ ಹೆಬ್ಬಾರ್, ರಫೀಕ್ ಕರಂಬಳ್ಳಿ, ಯಜ್ಞೇಶ್ ಆಚಾರ್ಯ, ಶಶಿರಾಜ್ ಕುಂದರ್, ಗಣಪತಿ ಶೆಟ್ಟಿಗಾರ್, ರಮೇಶ್ ಕಾಂಚನ್, ಶೋಭಾ ಪೂಜಾರಿ, ಸಲಿನ್ ಕರ್ಕಡ, ಸುಜಯ ಪೂಜಾರಿ, ವಿಜಯ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್‌ಕರ್ ಕಾರ್ಯಕ್ರಮ ನಿರ್ವಹಿಸಿದರು.

‘ಬಿಜೆಪಿ ಸುಳ್ಳು ಆರೋಪದಿಂದ ಸೋಲು’

ಸುಳ್ಳು ಆರೋಪದಿಂದ ವಿಧಾನ ಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಆದರೂ ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸಿದ ಸಂತೃಪ್ತಿಯಿದೆ. ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಮೂಲಕ ಕರಾವಳಿಯಲ್ಲಿ ಬಿಜೆಪಿ ಗೆಲ್ಲುವು ಸಾಧಿಸಿದೆ. ಆದರೆ ಇದು ತಾತ್ಕಾಲಿಕ. ಜನರಿಗೆ ಸತ್ಯದ ಅರಿವಾಗಿದೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವುದರಲ್ಲಿ ಸಂಶಯವಿಲ್ಲ. ನಗರಸಭಾ ಚುನಾವಣೆಯಲ್ಲಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT