‘ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ‘ಮೇಘ’ಗಳು ಆಕಾಶದಲ್ಲಿ ಯಾವಾಗಲೂ ಒಟ್ಟಾಗೆ ಚಲಿಸುತ್ತವೆ. ಆದರೆ ಮಳೆಯನ್ನು ಎಲ್ಲೋ ಸುರಿಸುತ್ತವೆ. ಇದನ್ನೇ ಇಟ್ಟುಕೊಂಡು ಪ್ರೇಮ ಕಥೆ ಸಿದ್ದಮಾಡಿಕೊಂಡೆ. ನಮ್ಮ ಸಿನಿಮಾದಲ್ಲಿ ‘ಮೇಘ’ ಎಂದರೆ ಪ್ರೀತಿ’’ ಎಂದರು ನಿರ್ದೇಶಕ ಚರಣ್.