ಊರಲ್ಲಿ ‘ಕೃಷ್ಣಪ್ಪ’ ಹೆಸರಿನ ಮೂವರಿದ್ದು, ಅದರಲ್ಲಿ ನಟ ಸಂಪತ್ ‘ಮೂರನೇ ಕೃಷ್ಣಪ್ಪ’ನಿಗೆ ಬಣ್ಣಹಚ್ಚಿದ್ದಾರೆ. ಈ ‘ಕೃಷ್ಣಪ್ಪ’ನ ಜೀವನದ ಸುತ್ತ ಚಿತ್ರದ ಕಥೆಯಿದೆ. ‘ವೀರಣ್ಣ’ನಾಗಿ ರಂಗಾಯಣ ರಘು ಇಲ್ಲಿ ಕಾಣಿಸಿಕೊಂಡಿದ್ದಾರೆ. ‘ಅಕಿರ’ ಮತ್ತು ‘ರಿಲ್ಯಾಕ್ಸ್ ಸತ್ಯ’ ಸಿನಿಮಾ ನಿರ್ದೇಶಿಸಿದ್ದ ನವೀನ್ ಅವರ ಮೂರನೇ ಸಿನಿಮಾ ಇದಾಗಿದೆ. ಶ್ರೀಪ್ರಿಯಾ ನಾಯಕಿಯಾಗಿ ನಟಿಸಿದ್ದು, ಸಂತೋಷ್, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ.