ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರನೂ ನಂದೇ; ಆಜ್ಞೆಯೂ ನಂದೇ ಎಂದ ದರ್ಶನ್!

Last Updated 1 ನವೆಂಬರ್ 2019, 12:31 IST
ಅಕ್ಷರ ಗಾತ್ರ

ಎಂ.ಡಿ. ಶ್ರೀಧರ್‌ ಮತ್ತು ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ಕಾಂಬಿನೇಷನ್‌ನಡಿ ತೆರೆಗೆ ಸಿದ್ಧವಾಗಿರುವ ‘ಒಡೆಯ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ನಲ್ಲಿನ ‘ದಚ್ಚು’ ಡೈಲಾಗ್‌ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ನಾನು ಅಧಿಕಾರದ ಆಸೆಯಿಂದ ಬಂದಿಲ್ಲ. ಅಧಿಕಾರನೇ ಆಸೆಪಟ್ಟು ನನ್ನನ್ನು ಇಲ್ಲಿಗೆ ಕರೆಯಿಸಿಕೊಂಡಿದೆ. ಇನ್ನು ಮುಂದೆ ಅಧಿಕಾರನೂ ನನ್ನದೇ; ಆಜ್ಞೆಯೂ ನನ್ನದೇ. ನನ್ನನ್ನು ಪೇಸ್‌ ಮಾಡಬೇಕು ಅಂದ್ರೆ ಗುಂಡಿಗೆಯಲ್ಲಿ ಧಮ್ಮು ಇರಬೇಕು’ ಎಂದು ದರ್ಶನ್‌ ಅವರ ಡೈಲಾಗ್‌ ವೈರಲ್‌ ಆಗಿದೆ.

ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್‌. ಇದರಲ್ಲಿ ಐವರು ಸಹೋದರರ ಪ್ರೀತಿಯ ಅಣ್ಣನ ಕಥೆ ಹೊಸೆಯಾಗಲಿದೆ. ಈಗಾಗಲೇ, ದರ್ಶನ್‌ ನಟನೆಯ ‘ಯಜಮಾನ’ ಮತ್ತು ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾಗಳು ಬಾಕ್ಸ್‌ಆಫೀಸ್‌ನಲ್ಲಿ ಗೆದ್ದಿವೆ. ಹಾಗಾಗಿ, ಒಡೆಯನ ಮೇಲೂ ನಿರೀಕ್ಷೆ ಹೆಚ್ಚಿದೆ. ಬೆಂಗಳೂರು, ಹೈದರಾಬಾದ್, ಮೈಸೂರು, ಚಿತ್ರದುರ್ಗ, ಸ್ವಿಡ್ಜರ್ಲೆಂಡ್‌ನಲ್ಲಿ ಶೂಟಿಂಗ್‌ ನಡೆಸಲಾಗಿದೆ. ಡಿಸೆಂಬರ್‌ ಮೊದಲ ಅಥವಾ ಎರಡನೇ ವಾರ ಈ ಸಿನಿಮಾ ಬಿಡುಗಡೆಯಾಗಲಿದೆ.

ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಎನ್‌. ಸಂದೇಶ್‌ ಬಂಡವಾಳ ಹೂಡಿದ್ದಾರೆ. ಎ.ವಿ. ಕೃಷ್ಣಕುಮಾರ್‌ (ಕೆ.ಕೆ.) ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT