<p>ನೀನಾಸಂ ಸತೀಶ್, ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಡಬ್ಬಿಂಗ್ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ನಿರ್ದೇಶಕನಾಗಿ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.</p>.<p>‘ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಗಿಸಿದ್ದೇವೆ. ಇಲ್ಲಿ ಅಣ್ಣಾವ್ರು, ವಿಷ್ಣುವರ್ಧನ್ ಸೇರಿದಂತೆ ಹಲವರು ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ’ ಎಂದರು ಸತೀಶ್.</p>.<p>70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾವಿದು. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆ ಇದಾಗಿದೆ.</p>.<p>ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಛಾಯಾಚಿತ್ರಗ್ರಹಣ, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೀನಾಸಂ ಸತೀಶ್, ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಡಬ್ಬಿಂಗ್ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ನಿರ್ದೇಶಕನಾಗಿ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.</p>.<p>‘ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಗಿಸಿದ್ದೇವೆ. ಇಲ್ಲಿ ಅಣ್ಣಾವ್ರು, ವಿಷ್ಣುವರ್ಧನ್ ಸೇರಿದಂತೆ ಹಲವರು ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ’ ಎಂದರು ಸತೀಶ್.</p>.<p>70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾವಿದು. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆ ಇದಾಗಿದೆ.</p>.<p>ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಛಾಯಾಚಿತ್ರಗ್ರಹಣ, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>