<p>ಮಂಜುಕವಿ ನಿರ್ದೇಶನದ ‘ತಿಕ್ಲು ರಾಮ’ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ನಟ ಚೇತನ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.</p>.<p>‘ಚಿತ್ರರಂಗ ಅಭಿವೃದ್ದಿ ಹೊಂದಬೇಕಾದರೆ ಕ್ರಿಯಾಶೀಲರು ಹೆಚ್ಚಾಗಬೇಕು. ಅಂಥ ತಂಡವನ್ನು ಇಟ್ಟುಕೊಂಡು ಮಂಜುಕವಿ ಸಿನಿಮಾ ಮಾಡುತ್ತಿದ್ದಾರೆ. ಶೀರ್ಷಿಕೆ ಹಾಸ್ಯಮಯವಾಗಿದ್ದರೂ ಸಮಾಜಕ್ಕೆ ಸಂದೇಶ ನೀಡುವ, ಕೌಟುಂಬಿಕ ಹಾಗೂ ಭಾವನಾತ್ಮಕ ವಿಷಯಗಳನ್ನು ಹೊಂದಿರುವ ಚಿತ್ರವನ್ನು ಮಾಡಲು ಈ ತಂಡ ಹೊರಟಿದೆ’ ಎಂದರು ಚೇತನ್.</p>.<p>ಶೃತಿ.ಜಿ.ಬಿ ಮತ್ತು ಕೋಮಲ ನಟರಾಜು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ವೀರ್, ಸಂಗೀತ, ಮಿತ್ರ, ಭಾಗ್ಯಶ್ರೀ, ಶೃತಿ.ಬಿ, ಗೋವಿಂದೇಗೌಡ, ವಿನೋದ್ ಗೊಬ್ಬರಗಾಲ, ಸುಚೇಂದ್ರ ಪ್ರಸಾದ್ ಮುಂತಾದವರು ತಾರಾಗಣದಲ್ಲಿದ್ದಾರೆ. </p>.<p>‘ಚಿತ್ರದಲ್ಲಿ ಪರಿಸರ, ಸಾಮಾಜಿಕ ಕಳಕಳಿ, ಒಟ್ಟು ಕುಟುಂಬದ ಕುರಿತಾದ ಅಂಶಗಳು ಇರಲಿವೆ. ಸೈಲೆಂಟ್ ಆಗಿದ್ದರೆ ರಾಮ, ಕೊಡಲಿ ಹಿಡಿದರೆ ತಿಕ್ಲು ರಾಮ. ಹಾಗಂತ ರಕ್ತಪಾತವನ್ನು ವೈಭವಿಕರಿಸುವುದಿಲ್ಲ. ಹಾಸನ ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಚನೆಯಿದೆ’ ಎಂದರು ನಿರ್ದೇಶಕ. </p>.<p>ವಿನು ಮನಸು ಹಿನ್ನೆಲೆ ಸಂಗೀತ, ರಾಜ್ ಕಡೂರು-ನಾಗರಾಜಮೂರ್ತಿ ಛಾಯಾಚಿತ್ರಗ್ರಹಣ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಜುಕವಿ ನಿರ್ದೇಶನದ ‘ತಿಕ್ಲು ರಾಮ’ ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ನಟ ಚೇತನ್ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.</p>.<p>‘ಚಿತ್ರರಂಗ ಅಭಿವೃದ್ದಿ ಹೊಂದಬೇಕಾದರೆ ಕ್ರಿಯಾಶೀಲರು ಹೆಚ್ಚಾಗಬೇಕು. ಅಂಥ ತಂಡವನ್ನು ಇಟ್ಟುಕೊಂಡು ಮಂಜುಕವಿ ಸಿನಿಮಾ ಮಾಡುತ್ತಿದ್ದಾರೆ. ಶೀರ್ಷಿಕೆ ಹಾಸ್ಯಮಯವಾಗಿದ್ದರೂ ಸಮಾಜಕ್ಕೆ ಸಂದೇಶ ನೀಡುವ, ಕೌಟುಂಬಿಕ ಹಾಗೂ ಭಾವನಾತ್ಮಕ ವಿಷಯಗಳನ್ನು ಹೊಂದಿರುವ ಚಿತ್ರವನ್ನು ಮಾಡಲು ಈ ತಂಡ ಹೊರಟಿದೆ’ ಎಂದರು ಚೇತನ್.</p>.<p>ಶೃತಿ.ಜಿ.ಬಿ ಮತ್ತು ಕೋಮಲ ನಟರಾಜು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ವೀರ್, ಸಂಗೀತ, ಮಿತ್ರ, ಭಾಗ್ಯಶ್ರೀ, ಶೃತಿ.ಬಿ, ಗೋವಿಂದೇಗೌಡ, ವಿನೋದ್ ಗೊಬ್ಬರಗಾಲ, ಸುಚೇಂದ್ರ ಪ್ರಸಾದ್ ಮುಂತಾದವರು ತಾರಾಗಣದಲ್ಲಿದ್ದಾರೆ. </p>.<p>‘ಚಿತ್ರದಲ್ಲಿ ಪರಿಸರ, ಸಾಮಾಜಿಕ ಕಳಕಳಿ, ಒಟ್ಟು ಕುಟುಂಬದ ಕುರಿತಾದ ಅಂಶಗಳು ಇರಲಿವೆ. ಸೈಲೆಂಟ್ ಆಗಿದ್ದರೆ ರಾಮ, ಕೊಡಲಿ ಹಿಡಿದರೆ ತಿಕ್ಲು ರಾಮ. ಹಾಗಂತ ರಕ್ತಪಾತವನ್ನು ವೈಭವಿಕರಿಸುವುದಿಲ್ಲ. ಹಾಸನ ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಚನೆಯಿದೆ’ ಎಂದರು ನಿರ್ದೇಶಕ. </p>.<p>ವಿನು ಮನಸು ಹಿನ್ನೆಲೆ ಸಂಗೀತ, ರಾಜ್ ಕಡೂರು-ನಾಗರಾಜಮೂರ್ತಿ ಛಾಯಾಚಿತ್ರಗ್ರಹಣ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>