<p>ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ‘ಸ್ಟೂಡೆಂಟ್ ಪಾರ್ಟಿ’ ವಿಡಿಯೊ ಹಾಡು ಬಿಡುಗಡೆಗೊಂಡಿದೆ. </p>.<p>ರ್ಯಾಪ್ ಶೈಲಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ವಿಜೇತ್ ಜೊತೆಯಾಗಿ ಹಾಡಿದ್ದಾರೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ‘ಒಂದೇ ಒಂದು ಪೆಗ್ಗಿಗೆ’ ಎಂಬ ಹಾಡು ಬಂದಿತ್ತು. ಅದು ಸೂಪರ್ಹಿಟ್ ಆಗಿತ್ತು.</p>.<p>ಜುಲೈನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಭ್ರಷ್ಟ ರಾಜಕಾರಣಿಯೊಬ್ಬನ ಪುತ್ರನ ಸುತ್ತ ಚಿತ್ರದ ಕಥಾಹಂದರವಿದೆ. ಶೀರ್ಷಿಕೆಯೇ ಹೇಳುವಂತೆ ಇದೊಂದು ಯೂತ್ ಸಬ್ಜೆಕ್ಟ್ ಒಳಗೊಂಡ ಸಿನಿಮಾ. ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಸಿನಿಮಾದಲ್ಲಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಃಸ್ಥಿತಿ, ಪೋಷಕರ ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನ ಸಿನಿಮಾದಲ್ಲಿದೆ ಎಂದಿದ್ದಾರೆ ನಿರ್ದೇಶಕರು. ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ಕಾಕ್ರೋಚ್ ಸುಧಿ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ‘ಸ್ಟೂಡೆಂಟ್ ಪಾರ್ಟಿ’ ವಿಡಿಯೊ ಹಾಡು ಬಿಡುಗಡೆಗೊಂಡಿದೆ. </p>.<p>ರ್ಯಾಪ್ ಶೈಲಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ವಿಜೇತ್ ಜೊತೆಯಾಗಿ ಹಾಡಿದ್ದಾರೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ‘ಒಂದೇ ಒಂದು ಪೆಗ್ಗಿಗೆ’ ಎಂಬ ಹಾಡು ಬಂದಿತ್ತು. ಅದು ಸೂಪರ್ಹಿಟ್ ಆಗಿತ್ತು.</p>.<p>ಜುಲೈನಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಭ್ರಷ್ಟ ರಾಜಕಾರಣಿಯೊಬ್ಬನ ಪುತ್ರನ ಸುತ್ತ ಚಿತ್ರದ ಕಥಾಹಂದರವಿದೆ. ಶೀರ್ಷಿಕೆಯೇ ಹೇಳುವಂತೆ ಇದೊಂದು ಯೂತ್ ಸಬ್ಜೆಕ್ಟ್ ಒಳಗೊಂಡ ಸಿನಿಮಾ. ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಸಿನಿಮಾದಲ್ಲಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಃಸ್ಥಿತಿ, ಪೋಷಕರ ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನ ಸಿನಿಮಾದಲ್ಲಿದೆ ಎಂದಿದ್ದಾರೆ ನಿರ್ದೇಶಕರು. ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ಕಾಕ್ರೋಚ್ ಸುಧಿ ಮುಂತಾದವರು ತಾರಾಬಳಗದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>