‘ಈ ಚಿತ್ರವನ್ನು ಜಗತ್ತಿನಲ್ಲಿರುವ 8 ಕೋಟಿ ಕನ್ನಡ ಮಾತನಾಡುವ ಜನರಿಗೆ ಹಾಗೂ ಭಾರತದ 150 ಕೋಟಿ ಜನರಿಗೆ ಅರ್ಪಣೆ’ ಎಂದು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ.
‘ಸಂಗೀತ, ಸಾಹಿತ್ಯ ಸೇರಿದಂತೆ ಅನಾದಿಕಾಲದಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕನ್ನಡ ನಾಡು ಸಾವಿರಾರು ವರ್ಷಗಳಿಂದ ನಿಸರ್ಗದತ್ತವಾಗಿಯೂ ಸಂಪದ್ಭರಿತವಾಗಿದೆ. ಇಂಥ ನಾಡಿನ ಕನ್ನಡ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ ಲಭಿಸಿದೆ’ ಎಂದಿದ್ದಾರೆ.