<p><strong>ಬೆಂಗಳೂರು:</strong> ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿ<br>ರುವ ‘ಕಾಂತಾರ ಒಂದು ದಂತಕಥೆ ಅಧ್ಯಾಯ 1’ ಬಿಡುಗಡೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಕನಕವತಿಯನ್ನು ಪರಿಚಯಿಸಿದೆ.</p><p>ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಈ ದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಇದೀಗ 'ಕನಕವತಿ'ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.</p>.<p>ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊಂದಿರುವ ಈ ಸಿನಿಮಾಗಾಗಿ ಒಂದು ಹೊಸ ಲೋಕವನ್ನೇ ರಿಷಬ್ ಸೃಷ್ಟಿಸಿದ್ದಾರೆ. </p><p>ಛಾಯಾಚಿತ್ರಗ್ರಾಹಕ ಅರವಿಂದ್ ಕಶ್ಯಪ್, ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್, ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ ಇಡೀ ಸಿನಿಮಾಗೆ ಅದ್ಭುತ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.</p><p>3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ಆಸ್ಕರ್ ಪ್ರಶಸ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಸಿನಿಮಾ ತಯಾರಾಗಿದೆ. ಚಿತ್ರವು ಕನ್ನಡ, ಹಿಂದಿ, ತೆಲುಗು, ಮಲಯಾಳ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಆಕ್ಟೋಬರ್ 2ರಂದು ತೆರೆ ಕಾಣಲಿದೆ.</p>.ಕಾಂತಾರ ಚಾಪ್ಟರ್ -1 ಚಿತ್ರೀಕರಣದ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲಂಸ್.ಕಾಂತಾರ ಪ್ರೀಕ್ವೆಲ್ನಲ್ಲಿ ಹೀಗಿರಲಿದ್ದಾರೆ ರಿಷಬ್: ಅಕ್ಟೋಬರ್ 2ಕ್ಕೆ ರಿಲೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿ<br>ರುವ ‘ಕಾಂತಾರ ಒಂದು ದಂತಕಥೆ ಅಧ್ಯಾಯ 1’ ಬಿಡುಗಡೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಕನಕವತಿಯನ್ನು ಪರಿಚಯಿಸಿದೆ.</p><p>ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಈ ದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಇದೀಗ 'ಕನಕವತಿ'ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.</p>.<p>ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊಂದಿರುವ ಈ ಸಿನಿಮಾಗಾಗಿ ಒಂದು ಹೊಸ ಲೋಕವನ್ನೇ ರಿಷಬ್ ಸೃಷ್ಟಿಸಿದ್ದಾರೆ. </p><p>ಛಾಯಾಚಿತ್ರಗ್ರಾಹಕ ಅರವಿಂದ್ ಕಶ್ಯಪ್, ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್, ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ ಇಡೀ ಸಿನಿಮಾಗೆ ಅದ್ಭುತ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.</p><p>3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ಆಸ್ಕರ್ ಪ್ರಶಸ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಸಿನಿಮಾ ತಯಾರಾಗಿದೆ. ಚಿತ್ರವು ಕನ್ನಡ, ಹಿಂದಿ, ತೆಲುಗು, ಮಲಯಾಳ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಆಕ್ಟೋಬರ್ 2ರಂದು ತೆರೆ ಕಾಣಲಿದೆ.</p>.ಕಾಂತಾರ ಚಾಪ್ಟರ್ -1 ಚಿತ್ರೀಕರಣದ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲಂಸ್.ಕಾಂತಾರ ಪ್ರೀಕ್ವೆಲ್ನಲ್ಲಿ ಹೀಗಿರಲಿದ್ದಾರೆ ರಿಷಬ್: ಅಕ್ಟೋಬರ್ 2ಕ್ಕೆ ರಿಲೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>