ರಿಷಬ್ ಶೆಟ್ಟಿ ಹಾಗೂ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರಾಹ ರೂಪಂ ಹಾಡಿಗೆ ಯಕ್ಷಗಾನ ಕಲಾವಿದರು ಪ್ರದರ್ಶನ ನೀಡಿದ ಬಳಿಕ, ಪ್ರೈಂ ತಂಡವು ‘ಕಾಂತಾರ–ಒಂದು ದಂತಕಥೆ’ ಅಧ್ಯಾಯ 1ರ ಬಿಡುಗಡೆಯನ್ನು ಘೋಷಿಸಿತು. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಹೊಸ ಸಿನಿಮಾ ‘ಕಾಂತಾರ–ಒಂದು ದಂತಕಥೆ’ಯ ಪ್ರೀಕ್ವೆಲ್ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ.