<p><strong>ಬೆಂಗಳೂರು</strong>: ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಕಾಂತಾರ–ಅಧ್ಯಾಯ–1’ ಅ.2ರಂದು ತೆರೆಕಾಣುತ್ತಿದೆ. ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ನಾನಾವತಾರಗಳಲ್ಲಿ ರಿಷಬ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. </p><p>ಸೋಮವಾರ (ಸೆ.22) ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ಚಾನಲ್ನಲ್ಲಿ ಟ್ರೇಲರ್ ತೆರೆಕಂಡಿದ್ದು, ಒಂದೇ ದಿನದಲ್ಲಿ 50 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. </p><p>ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಟ್ರೇಲರ್ ಬಿಡುಗಡೆಯಾಗಿದೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿರುವ ಚಿತ್ರತಂಡ, ‘ಟ್ರೇಲರ್ 5.5 ಲಕ್ಷ ವೀಕ್ಷಣೆ ಕಂಡಿದೆ. ಇನ್ನೂ ವೀಕ್ಷಣೆ ಮುಂದುವರಿದಿದೆ. ಕಾಂತಾರದ ದಿವ್ಯ ಕಿಡಿ ಇಂಟರ್ನೆಟ್ನಲ್ಲಿ ಸಂಚಲ ಮೂಡಿಸಿದೆ’ ಎಂದು ಬರೆದುಕೊಂಡಿದೆ. </p><p>‘ಕಾಂತಾರ’ ಸಿನಿಮಾದಲ್ಲಿ ‘ಶಿವ’ನ ತಂದೆ ಕಾಣೆಯಾದ ಜಾಗದಿಂದ ‘ಪ್ರೀಕ್ವೆಲ್’ನ ಕಥೆ ಆರಂಭವಾಗಲಿದೆ. ‘ಶಿವ’ನ ಹಿರಿಯರ ಕಥೆ ‘ಪ್ರೀಕ್ವೆಲ್’ನಲ್ಲಿದ್ದು, ಧರ್ಮ ಕಾಪಾಡಲು ಬಂದ ಶಿವನ ಗಣದ ಉಲ್ಲೇಖ ಇಲ್ಲಿದೆ. ಆದಿ ದೈವ ಎಂದು ಕರೆಯಲ್ಪಡುವ ‘ಬೆರ್ಮೆ’ಯ ಸುತ್ತ ಈ ಸಿನಿಮಾ ಸಾಗುತ್ತದೆ. ‘ಈಶ್ವರ’ನಾಗಿಯೂ ರಿಷಬ್ ಶೆಟ್ಟಿ ಕ್ಲೈಮ್ಯಾಕ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜಕುಮಾರಿಯಾಗಿ ರುಕ್ಮಿಣಿ ವಸಂತ್, ‘ರಾಜ’ನಾಗಿ ಮಲಯಾಳ ನಟ ಜಯರಾಮ್, ‘ಕುಲಶೇಖರ’ ಎಂಬ ಪಾತ್ರದಲ್ಲಿ ಬಾಲಿವುಡ್ ನಟ ಗುಲ್ಶನ್ ದೇವಯ್ಯ ಚಿತ್ರದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಕಾಂತಾರ–ಅಧ್ಯಾಯ–1’ ಅ.2ರಂದು ತೆರೆಕಾಣುತ್ತಿದೆ. ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ನಾನಾವತಾರಗಳಲ್ಲಿ ರಿಷಬ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. </p><p>ಸೋಮವಾರ (ಸೆ.22) ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ಚಾನಲ್ನಲ್ಲಿ ಟ್ರೇಲರ್ ತೆರೆಕಂಡಿದ್ದು, ಒಂದೇ ದಿನದಲ್ಲಿ 50 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. </p><p>ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಟ್ರೇಲರ್ ಬಿಡುಗಡೆಯಾಗಿದೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿರುವ ಚಿತ್ರತಂಡ, ‘ಟ್ರೇಲರ್ 5.5 ಲಕ್ಷ ವೀಕ್ಷಣೆ ಕಂಡಿದೆ. ಇನ್ನೂ ವೀಕ್ಷಣೆ ಮುಂದುವರಿದಿದೆ. ಕಾಂತಾರದ ದಿವ್ಯ ಕಿಡಿ ಇಂಟರ್ನೆಟ್ನಲ್ಲಿ ಸಂಚಲ ಮೂಡಿಸಿದೆ’ ಎಂದು ಬರೆದುಕೊಂಡಿದೆ. </p><p>‘ಕಾಂತಾರ’ ಸಿನಿಮಾದಲ್ಲಿ ‘ಶಿವ’ನ ತಂದೆ ಕಾಣೆಯಾದ ಜಾಗದಿಂದ ‘ಪ್ರೀಕ್ವೆಲ್’ನ ಕಥೆ ಆರಂಭವಾಗಲಿದೆ. ‘ಶಿವ’ನ ಹಿರಿಯರ ಕಥೆ ‘ಪ್ರೀಕ್ವೆಲ್’ನಲ್ಲಿದ್ದು, ಧರ್ಮ ಕಾಪಾಡಲು ಬಂದ ಶಿವನ ಗಣದ ಉಲ್ಲೇಖ ಇಲ್ಲಿದೆ. ಆದಿ ದೈವ ಎಂದು ಕರೆಯಲ್ಪಡುವ ‘ಬೆರ್ಮೆ’ಯ ಸುತ್ತ ಈ ಸಿನಿಮಾ ಸಾಗುತ್ತದೆ. ‘ಈಶ್ವರ’ನಾಗಿಯೂ ರಿಷಬ್ ಶೆಟ್ಟಿ ಕ್ಲೈಮ್ಯಾಕ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜಕುಮಾರಿಯಾಗಿ ರುಕ್ಮಿಣಿ ವಸಂತ್, ‘ರಾಜ’ನಾಗಿ ಮಲಯಾಳ ನಟ ಜಯರಾಮ್, ‘ಕುಲಶೇಖರ’ ಎಂಬ ಪಾತ್ರದಲ್ಲಿ ಬಾಲಿವುಡ್ ನಟ ಗುಲ್ಶನ್ ದೇವಯ್ಯ ಚಿತ್ರದಲ್ಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>