ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಟಕ–ದಮನಕ ಸಿನಿಮಾ: ಭಟ್ರು ಹೆಣೆದ ಕುತಂತ್ರಿ ನರಿಗಳ ಕಥೆ!

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ. ಇನ್ನೊಂದರ ಹೆಸರು ದಮನಕ.
Published 14 ಜುಲೈ 2023, 19:29 IST
Last Updated 14 ಜುಲೈ 2023, 19:29 IST
ಅಕ್ಷರ ಗಾತ್ರ

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ. ಇನ್ನೊಂದರ ಹೆಸರು ದಮನಕ. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆಕೆಡಿಸಿ ಇತಿಹಾಸವಾದವು. ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ...’ ಹೀಗೊಂದು ಎಚ್ಚರಿಕೆಯನ್ನು ನೀಡಿದ್ದಾರೆ ನಿರ್ದೇಶಕ ಯೋಗರಾಜ ಭಟ್‌. 

ಸದ್ಯ ‘ಗರಡಿ’ ಸಿನಿಮಾದ ಚಿತ್ರೀಕರಣ ಪೂರ್ಣಗೊಳಿಸಿ, ಹೊಸ ಪ್ರೊಜೆಕ್ಟ್‌ ಕೈಗೆತ್ತಿಕೊಂಡಿರುವ ಯೋಗರಾಜ್ ಭಟ್‌ ಅವರು ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಅವರಿಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚಿತ್ರಕ್ಕೆ ‘K ಕರಟಕ D ದಮನಕ’ ಎಂಬ ವಿಭಿನ್ನ ಶೀರ್ಷಿಕೆಯನ್ನೂ ಇಡಲಾಗಿತ್ತು. ಇದೀಗ ಚಿತ್ರದಲ್ಲಿ ನಟರಾದ ಶಿವರಾಜ್‌ಕುಮಾರ್‌ ಹಾಗೂ ಪ್ರಭುದೇವ ಅವರ ಲುಕ್‌ ಹೇಗಿರುತ್ತದೆ ಎನ್ನುವುದನ್ನು ಯೋಗರಾಜ್‌ ಭಟ್‌ ಅವರು ರಿವೀಲ್‌ ಮಾಡಿದ್ದಾರೆ.  

ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್‌ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣದಲ್ಲಿ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ರಂಗಾಯಣ ರಘು, ನಿಶ್ವಿಕಾ ನಾಯ್ಡು ಮುಂತಾದವರು ಭಾಗಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT