ರಾಕ್ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣದಲ್ಲಿ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ರಂಗಾಯಣ ರಘು, ನಿಶ್ವಿಕಾ ನಾಯ್ಡು ಮುಂತಾದವರು ಭಾಗಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಯೋಗರಾಜ್ ಭಟ್ ಹಾಗೂ ರವಿ ಈ ಚಿತ್ರಕ್ಕೆ ಕಥೆ ರಚಿಸಿದ್ದು, ಚಿತ್ರಕಥೆಯನ್ನು ಯೋಗರಾಜ್ ಭಟ್, ರವಿ ಹಾಗೂ ಸುಬ್ರಹ್ಮಣ್ಯ ಬರೆದಿದ್ದಾರೆ.