ಚಿತ್ರರಂಗದ ಇತರ ಗಣ್ಯರೊಂದಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಹಾಗೂ ವಾರ್ತಾ ಸಚಿವ ಸಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿ ಪುರಾಣಿಕ್ ಅವರು ಮನವಿ ಸಲ್ಲಿಸಿದರು. ‘ತೀವ್ರ ಸಂಕಷ್ಟದಲ್ಲಿರುವ ಕನ್ನಡ ಚಿತ್ರೋದ್ಯಮದವರಿಗೆ ಸರ್ಕಾರದ ವತಿಯಿಂದ ಆರ್ಥಿಕ ನೆರವು ಹಾಗೂ ಲಸಿಕೆಯನ್ನು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿದ್ದನ್ನು ಕನ್ನಡ ಚಿತ್ರರಂಗ ಸ್ಮರಿಸುತ್ತದೆ. ಲಾಕ್ಡೌನ್ನಿಂದಾಗಿ ಚಿತ್ರೋದ್ಯಮದ ಚಟುವಟಿಕೆಗಳು ಸ್ಥಗಿತವಾಗಿರುವುದರಿಂದ ಇಡೀ ಚಿತ್ರೋದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರೋದ್ಯಮದ ಎಷ್ಟೋ ಕಾರ್ಮಿಕರು, ತಂತ್ರಜ್ಞರು ಪಡಿತರ ಕಾರ್ಡ್ಗಳನ್ನೂ ಹೊಂದಿರುವುದಿಲ್ಲ. ಹೀಗಾಗಿ ಪ್ರತೀ ಕುಟುಂಬಕ್ಕೆ 25 ಕೆಜಿಯ ಒಂದು ಚೀಲದಂತೆ ಕನಿಷ್ಟ 5000 ಚೀಲ ಅಕ್ಕಿಯನ್ನು ಉಚಿತವಾಗಿ ವಿತರಿಸಿದರೆ ಅವರ ಕುಟುಂಬಗಳಿಗೆ ನೆರವಾಗಲಿದೆ’ ಎಂದು ಅವರು ಮನವಿಯಲ್ಲಿ ವಿವರಿಸಿದ್ದಾರೆ.