<figcaption>""</figcaption>.<figcaption>""</figcaption>.<p><strong>ಬೆಂಗಳೂರು:</strong> 2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ 'ಆ ಕರಾಳ ರಾತ್ರಿ' ಸಿನಿಮಾ ಆಯ್ಕೆಯಾಗಿದೆ. 'ರಾಮನ ಸವಾರಿ' ಮತ್ತು 'ಒಂದಲ್ಲಾ ಎರಡಲ್ಲಾ' ಸಿನಿಮಾಗಳು ಕ್ರಮವಾಗಿಎರಡನೇ ಮತ್ತು ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿವೆ.</p>.<p>ರಿಷಬ್ ಶೆಟ್ಟಿ ನಿರ್ದೇಶನ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿಗೆ, 'ಸಂತಕವಿ ಕನಕದಾಸ ರಾಮಧಾನ್ಯ' ಸಿನಿಮಾ ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿಗೆಹಾಗೂ ಅತ್ಯುತ್ತಮ ಮಕ್ಕಳ ಚಿತ್ರವಾಗಿ 'ಹೂ ಬಳ್ಳಿ' ಆಯ್ಕೆಯಾಗಿವೆ.</p>.<p>ಅತ್ಯುತ್ತಮ ನಟನಾಗಿ ರಾಘವೇಂದ್ರ ರಾಜ್ಕುಮಾರ್, ಅತ್ಯುತ್ತಮ ನಟಿಯಾಗಿ ಮೇಘನಾ ರಾಜ್ ಮತ್ತು ಅತ್ಯುತ್ತಮ ಪೋಷಕ ನಟರಾಗಿ ಬಾಲಾಜಿ ಮನೋಹರ್ ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಆಯ್ಕೆಯಾಗಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2018 ನೆ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದರು. ಆಯ್ಕೆ ಸಮಿತಿಗಳ ಅಧ್ಯಕ್ಷರುಗಳಾದ ಜೋಸೈಮನ್, ವಸಂತಕುಮಾರ್ ಪಾಟೀಲ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್ ಎನ್. ಸಿದ್ದರಾಮಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><strong>ಪ್ರಶಸ್ತಿ ಪಟ್ಟಿ...</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<p><strong>ಬೆಂಗಳೂರು:</strong> 2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ 'ಆ ಕರಾಳ ರಾತ್ರಿ' ಸಿನಿಮಾ ಆಯ್ಕೆಯಾಗಿದೆ. 'ರಾಮನ ಸವಾರಿ' ಮತ್ತು 'ಒಂದಲ್ಲಾ ಎರಡಲ್ಲಾ' ಸಿನಿಮಾಗಳು ಕ್ರಮವಾಗಿಎರಡನೇ ಮತ್ತು ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿವೆ.</p>.<p>ರಿಷಬ್ ಶೆಟ್ಟಿ ನಿರ್ದೇಶನ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿಗೆ, 'ಸಂತಕವಿ ಕನಕದಾಸ ರಾಮಧಾನ್ಯ' ಸಿನಿಮಾ ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿಗೆಹಾಗೂ ಅತ್ಯುತ್ತಮ ಮಕ್ಕಳ ಚಿತ್ರವಾಗಿ 'ಹೂ ಬಳ್ಳಿ' ಆಯ್ಕೆಯಾಗಿವೆ.</p>.<p>ಅತ್ಯುತ್ತಮ ನಟನಾಗಿ ರಾಘವೇಂದ್ರ ರಾಜ್ಕುಮಾರ್, ಅತ್ಯುತ್ತಮ ನಟಿಯಾಗಿ ಮೇಘನಾ ರಾಜ್ ಮತ್ತು ಅತ್ಯುತ್ತಮ ಪೋಷಕ ನಟರಾಗಿ ಬಾಲಾಜಿ ಮನೋಹರ್ ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಆಯ್ಕೆಯಾಗಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2018 ನೆ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದರು. ಆಯ್ಕೆ ಸಮಿತಿಗಳ ಅಧ್ಯಕ್ಷರುಗಳಾದ ಜೋಸೈಮನ್, ವಸಂತಕುಮಾರ್ ಪಾಟೀಲ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್ ಎನ್. ಸಿದ್ದರಾಮಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<p><strong>ಪ್ರಶಸ್ತಿ ಪಟ್ಟಿ...</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>