ಮಂಡಳಿಯ ಅಧ್ಯಕ್ಷ ಭಾ.ಮ.ಹರೀಶ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬೇಡಿಕೆ ಪತ್ರ ಸಲ್ಲಿಸಿದ್ದು, ‘ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರವೇಶದರ ದುಬಾರಿಯಾಗಿದ್ದು, ಕನ್ನಡ ಪ್ರೇಕ್ಷಕರಿಗೆ ಹೊರೆಯಾಗುತ್ತಿದೆ. ಆದಕಾರಣ ಏಕರೀತಿಯ ಪ್ರವೇಶದರ ನಿಗದಿಪಡಿಸಿದರೆ, ಚಿತ್ರಮಂದಿರಗಳಿಗೆ ಹೆಚ್ಚಿನ ಪ್ರೇಕ್ಷಕರು ಬರುವಂತಾಗಲಿದೆ’ ಎಂದು ಉಲ್ಲೇಖಿಸಿದ್ದಾರೆ.