<p>ಕೆಲವು ದಿನಗಳ ಹಿಂದೆ ಬಿಡುಗಡೆಯಾದ ಸೂರ್ಯ, ತ್ರಿಷಾ ನಟನೆಯ 'ಕರುಪ್ಪು' ಚಿತ್ರದ ದೃಶ್ಯವೊಂದರಲ್ಲಿನ ಸಂಭಾಷಣೆಯು ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆ ಚಿತ್ರತಂಡ ಕ್ಷಮೆ ಕೇಳಿದೆ.</p><p>ಈ ಕುರಿತು ನಿರ್ಮಾಣ ಸಂಸ್ಥೆ ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಇಳಿಯರಾಜ ಅವರಿಗೆ ಸಂಬಂಧಿಸಿದ ದೃಶ್ಯವನ್ನು ತೆಗೆಯುವುದಾಗಿ ಹೇಳಿದೆ.</p><p>‘ಭಾರತೀಯ <strong><a href="https://www.prajavani.net/cinesamman/season2">ಚಿತ್ರರಂಗ</a></strong>ಕ್ಕೆ ಸಂಗೀತ ಮಾಂತ್ರಿಕ ಇಳಯರಾಜ ಅವರ ಕೊಡುಗೆ ಅಪಾರ . ಎಲ್ಲಾ ಕಾಲದ ಜನರಿಗೂ ಇವರ ಹಾಡು ಸ್ಪೂರ್ತಿಯಾಗಿದೆ. ಅವರು ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮೊದಲು ನಾವು ಅವರಿಗೆ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇವೆ’ ಎಂದಿದೆ. </p><p>‘ಕರುಪ್ಪು’ ಚಿತ್ರದಲ್ಲಿನ ಸಂಭಾಷಣೆಯೊಂದು ಇಳಯರಾಜ ಹಾಗೂ ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿರುವುದು ತಿಳಿದಿದೆ. ಅವರಿಗೆ ನೋವುಂಟು ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಕೇವಲ ಮನರಂಜನೆ ದೃಷ್ಟಿಯಿಂದ ಅವರ ಹೆಸರನ್ನು ಈ ಚಿತ್ರದಲ್ಲಿ ಬಳಕೆ ಮಾಡಿದ್ದೇವೆ. ಇದರಿಂದ ಅವರಿಗೆ ನೋವಾಗಿದ್ದರೆ ಈ ಮೂಲಕ ಕ್ಷಮೆಯಾಚಿಸುತ್ತೇವೆ ಹಾಗೂ ಅವರಿಗೆ ಸಂಬಂಧಿಸಿದ ದೃಶ್ಯವನ್ನು ತೆಗೆದುಹಾಕಲು ಚಿತ್ರತಂಡ ನಿರ್ಧರಿಸಿದೆ' ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಲವು ದಿನಗಳ ಹಿಂದೆ ಬಿಡುಗಡೆಯಾದ ಸೂರ್ಯ, ತ್ರಿಷಾ ನಟನೆಯ 'ಕರುಪ್ಪು' ಚಿತ್ರದ ದೃಶ್ಯವೊಂದರಲ್ಲಿನ ಸಂಭಾಷಣೆಯು ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆ ಚಿತ್ರತಂಡ ಕ್ಷಮೆ ಕೇಳಿದೆ.</p><p>ಈ ಕುರಿತು ನಿರ್ಮಾಣ ಸಂಸ್ಥೆ ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಇಳಿಯರಾಜ ಅವರಿಗೆ ಸಂಬಂಧಿಸಿದ ದೃಶ್ಯವನ್ನು ತೆಗೆಯುವುದಾಗಿ ಹೇಳಿದೆ.</p><p>‘ಭಾರತೀಯ <strong><a href="https://www.prajavani.net/cinesamman/season2">ಚಿತ್ರರಂಗ</a></strong>ಕ್ಕೆ ಸಂಗೀತ ಮಾಂತ್ರಿಕ ಇಳಯರಾಜ ಅವರ ಕೊಡುಗೆ ಅಪಾರ . ಎಲ್ಲಾ ಕಾಲದ ಜನರಿಗೂ ಇವರ ಹಾಡು ಸ್ಪೂರ್ತಿಯಾಗಿದೆ. ಅವರು ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮೊದಲು ನಾವು ಅವರಿಗೆ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇವೆ’ ಎಂದಿದೆ. </p><p>‘ಕರುಪ್ಪು’ ಚಿತ್ರದಲ್ಲಿನ ಸಂಭಾಷಣೆಯೊಂದು ಇಳಯರಾಜ ಹಾಗೂ ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿರುವುದು ತಿಳಿದಿದೆ. ಅವರಿಗೆ ನೋವುಂಟು ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಕೇವಲ ಮನರಂಜನೆ ದೃಷ್ಟಿಯಿಂದ ಅವರ ಹೆಸರನ್ನು ಈ ಚಿತ್ರದಲ್ಲಿ ಬಳಕೆ ಮಾಡಿದ್ದೇವೆ. ಇದರಿಂದ ಅವರಿಗೆ ನೋವಾಗಿದ್ದರೆ ಈ ಮೂಲಕ ಕ್ಷಮೆಯಾಚಿಸುತ್ತೇವೆ ಹಾಗೂ ಅವರಿಗೆ ಸಂಬಂಧಿಸಿದ ದೃಶ್ಯವನ್ನು ತೆಗೆದುಹಾಕಲು ಚಿತ್ರತಂಡ ನಿರ್ಧರಿಸಿದೆ' ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>