<p>ಕನ್ನಡ ಚಲನಚಿತ್ರ ಕಪ್(ಕೆಸಿಸಿ) 3ನೇ ಆವೃತ್ತಿಗೆ ಭರ್ಜರಿಯಾದ ಸಿದ್ಧತೆ ನಡೆದಿದ್ದು, ಶುಕ್ರವಾರ ಹಾಗೂ ಶನಿವಾರ<br />(ಫೆ.24–25) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ನಡೆಯಲಿವೆ.</p>.<p>ಈ ಬಾರಿಯ ಕೆಸಿಸಿಯಲ್ಲಿ ಆರು ತಂಡಗಳಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರರಾದ ಬ್ರಯನ್ ಲಾರಾ, ಸುರೇಶ್ ರೈನಾ, ಕ್ರಿಸ್ ಗೇಲ್, ಬದರೀನಾಥ್, ಹರ್ಷಲ್ ಗಿಬ್ಸ್, ತಿಲಕರತ್ನೆ ದಿಲ್ಶಾನ್ ಈ ತಂಡಗಳಲ್ಲಿ ಆಡುತ್ತಿರುವುದು ವಿಶೇಷ. ಈ ಆಟಗಾರರು ಗುರುವಾರ(ಫೆ.23) ತಂಡ ಸೇರಿಕೊಳ್ಳಲಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಟರಾದ ಶಿವರಾಜ್ಕುಮಾರ್, ಸುದೀಪ್, ಗಣೇಶ್, ಧನಂಜಯ, ಧ್ರುವ ಸರ್ಜಾ ತಂಡಗಳು ಇಲ್ಲಿವೆ. ಕಾರ್ಯಕ್ರಮದ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಟ ಸುದೀಪ್, ‘ಈ ವರ್ಷದ ಕೆಸಿಸಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /><br />ಎರಡನೇ ಆವೃತ್ತಿಯ ಎರಡೂ ದಿನಗಳ ಟಿಕೆಟ್ ಸಂಖ್ಯೆಗಿಂತ ದುಪ್ಪಟ್ಟು ಟಿಕೆಟ್ಗಳು ಈಗಾಗಲೇ ಮಾರಾಟವಾಗಿವೆ. ಆನ್ಲೈನ್ ಜೊತೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಸಂಖ್ಯೆ 18ರಲ್ಲಿ ಟಿಕೆಟ್ ಮಾರಾಟ ನಡೆಯುತ್ತಿದೆ. ಗುರುವಾರವೂ ಟಿಕೆಟ್ ಮಾರಾಟ ತೆರೆದಿರುವುದರಿಂದ ಈ ಬಾರಿ ಕ್ರೀಡಾಂಗಣ ಭರ್ತಿಯಾಗುವ ಎಲ್ಲ ಲಕ್ಷಣಗಳಿವೆ. ಮೊದಲ ದಿನ 3.30ಕ್ಕೆ ಮೊದಲ ಪಂದ್ಯಾವಳಿ ಆರಂಭವಾಗಲಿದೆ. ಜೀ ಪಿಕ್ಚರ್ಸ್ನಲ್ಲಿ ಪಂದ್ಯಾವಳಿಗಳ ನೇರ ಪ್ರಸಾರ ಇರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಬಾವುಟಕ್ಕೆ ಸಂಬಂಧಿಸಿದ ವಿಶೇಷವಾದ ಕಾರ್ಯಕ್ರಮವೊಂದು ಇರಲಿದೆ’ ಎಂದರು. </p>.<p>ಮೂರನೇ ಆವೃತ್ತಿಗೆ ಜನರಿಂದ ಸಿಕ್ಕ ಪ್ರತಿಕ್ರಿಯೆಯನ್ನು ನೋಡಿ, ಮುಂದಿನ ಆವೃತ್ತಿಯನ್ನು ನಾಲ್ಕು ದಿನಕ್ಕೆ ವಿಸ್ತರಿಸುವ ಆಲೋಚನೆ ಇದೆ ಎಂದರು ಸುದೀಪ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡ ಚಲನಚಿತ್ರ ಕಪ್(ಕೆಸಿಸಿ) 3ನೇ ಆವೃತ್ತಿಗೆ ಭರ್ಜರಿಯಾದ ಸಿದ್ಧತೆ ನಡೆದಿದ್ದು, ಶುಕ್ರವಾರ ಹಾಗೂ ಶನಿವಾರ<br />(ಫೆ.24–25) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ನಡೆಯಲಿವೆ.</p>.<p>ಈ ಬಾರಿಯ ಕೆಸಿಸಿಯಲ್ಲಿ ಆರು ತಂಡಗಳಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರರಾದ ಬ್ರಯನ್ ಲಾರಾ, ಸುರೇಶ್ ರೈನಾ, ಕ್ರಿಸ್ ಗೇಲ್, ಬದರೀನಾಥ್, ಹರ್ಷಲ್ ಗಿಬ್ಸ್, ತಿಲಕರತ್ನೆ ದಿಲ್ಶಾನ್ ಈ ತಂಡಗಳಲ್ಲಿ ಆಡುತ್ತಿರುವುದು ವಿಶೇಷ. ಈ ಆಟಗಾರರು ಗುರುವಾರ(ಫೆ.23) ತಂಡ ಸೇರಿಕೊಳ್ಳಲಿದ್ದು, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಟರಾದ ಶಿವರಾಜ್ಕುಮಾರ್, ಸುದೀಪ್, ಗಣೇಶ್, ಧನಂಜಯ, ಧ್ರುವ ಸರ್ಜಾ ತಂಡಗಳು ಇಲ್ಲಿವೆ. ಕಾರ್ಯಕ್ರಮದ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಟ ಸುದೀಪ್, ‘ಈ ವರ್ಷದ ಕೆಸಿಸಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.<br /><br />ಎರಡನೇ ಆವೃತ್ತಿಯ ಎರಡೂ ದಿನಗಳ ಟಿಕೆಟ್ ಸಂಖ್ಯೆಗಿಂತ ದುಪ್ಪಟ್ಟು ಟಿಕೆಟ್ಗಳು ಈಗಾಗಲೇ ಮಾರಾಟವಾಗಿವೆ. ಆನ್ಲೈನ್ ಜೊತೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಸಂಖ್ಯೆ 18ರಲ್ಲಿ ಟಿಕೆಟ್ ಮಾರಾಟ ನಡೆಯುತ್ತಿದೆ. ಗುರುವಾರವೂ ಟಿಕೆಟ್ ಮಾರಾಟ ತೆರೆದಿರುವುದರಿಂದ ಈ ಬಾರಿ ಕ್ರೀಡಾಂಗಣ ಭರ್ತಿಯಾಗುವ ಎಲ್ಲ ಲಕ್ಷಣಗಳಿವೆ. ಮೊದಲ ದಿನ 3.30ಕ್ಕೆ ಮೊದಲ ಪಂದ್ಯಾವಳಿ ಆರಂಭವಾಗಲಿದೆ. ಜೀ ಪಿಕ್ಚರ್ಸ್ನಲ್ಲಿ ಪಂದ್ಯಾವಳಿಗಳ ನೇರ ಪ್ರಸಾರ ಇರಲಿದೆ. ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಬಾವುಟಕ್ಕೆ ಸಂಬಂಧಿಸಿದ ವಿಶೇಷವಾದ ಕಾರ್ಯಕ್ರಮವೊಂದು ಇರಲಿದೆ’ ಎಂದರು. </p>.<p>ಮೂರನೇ ಆವೃತ್ತಿಗೆ ಜನರಿಂದ ಸಿಕ್ಕ ಪ್ರತಿಕ್ರಿಯೆಯನ್ನು ನೋಡಿ, ಮುಂದಿನ ಆವೃತ್ತಿಯನ್ನು ನಾಲ್ಕು ದಿನಕ್ಕೆ ವಿಸ್ತರಿಸುವ ಆಲೋಚನೆ ಇದೆ ಎಂದರು ಸುದೀಪ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>