ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್‌ನತ್ತ ಹೆಜ್ಜೆ ಇಟ್ಟ ಧರ್ಮ ಕೀರ್ತಿರಾಜ್

Last Updated 16 ಜೂನ್ 2021, 14:49 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡದ ‘ನವಗ್ರಹ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟ ಧರ್ಮಕೀರ್ತಿರಾಜ್, ಇದೀಗ ಬಾಲಿವುಡ್‌ನತ್ತ ಮೊದಲ ಹೆಜ್ಜೆ ಇಟ್ಟಿದ್ದಾರೆ.

ನವಗ್ರಹ ಚಿತ್ರದಲ್ಲಿನ ‘ಕಣ್ ಕಣ್ಣ ಸಲಿಗೆ’ ಹಾಡು ಧರ್ಮಕೀರ್ತಿರಾಜ್‌ ಅವರಿಗೆ ಹೆಸರು ತಂದುಕೊಟ್ಟಿತ್ತು. ನಂತರ ನಾಯಕನಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಅವರು, ಇದೀಗ ‘ಕಿತ್ನಾ ಮಜಾ ಹೈ’ ಎನ್ನುವ ನಾಲ್ಕು ನಿಮಿಷದ ಹಿಂದಿ ವಿಡಿಯೋ ಆಲ್ಬಂನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೀತಿಯಲ್ಲಿ ಮೋಸಹೋಗಿ ಆತ್ನಹತ್ಯೆಗೆ ಶರಣಾಗುವ ಹುಡುಗಿಯನ್ನು ಕಾಪಾಡಿ, ಅವಳಲ್ಲಿ ಅನುರಕ್ತಳಾಗಿ ಒಂದಾಗುವ ಕತೆಯನ್ನು ಈ ಹಾಡು ಹೊಂದಿದೆ. ಈ ಹಾಡನ್ನು ರವಿಶರ್ಮ ನಿರ್ದೇಶನ ಮಾಡಿದ್ದು, ಪಪ್ಪುಮಲ ಅವರು ಕ್ರಿಯೇಟೀವ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಯುನೈಟೆಡ್ ಫಿಲಿಂಸ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಯೊಂದಿಗೆ ಸೇರಿಕೊಂಡುಅಶೋಕ್‌ಜೈನ್ ಈ ಆಲ್ಬಂ ನಿರ್ಮಾಣ ಮಾಡಿದ್ದಾರೆ. ನಗ್ಮಅಕ್ತರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಲ್ತಾಫ್‌ಸಯ್ಯೀದ್ ಈ ಆಲ್ಬಂನ ಗಾಯಕರಾಗಿದ್ದು, ಶ್ರೀಕಾಂತ್‌ ಅಸತಿ ಛಾಯಾಗ್ರಹಣವಿದೆ. ಈ ಆಲ್ಬಂ ಯೂಟ್ಯೂಬ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT