<p><strong>ತಿರುವನಂತಪುರ:</strong> ವಿವಾದಿತ ‘ದಿ ಕೇರಳ ಸ್ಟೋರಿ–2’ ಚಿತ್ರ ಬಿಡುಗಡೆಗೆ ಏಕ ಸದಸ್ಯ ಪೀಠ ನೀಡಿದ್ದ ತಡೆಯನ್ನು ಕೇರಳ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.</p>.ಟಿಕೆಟ್ ಹಣ ವಾಪಾಸ್ ಮಾಡಿ, ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಂಡ ‘ಕೇರಳ ಸ್ಟೋರಿ’.<p>ನ್ಯಾಯಮೂರ್ತಿಗಳಾದ ಎಸ್.ಎ. ಧರ್ಮಾಧಿಕಾರಿ ಹಾಗೂ ಪಿ.ವಿ ಬಾಲಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು, ನ್ಯಾಯಮೂರ್ತಿ ಬೇಚು ಕುರಿಯನ್ ಥೋಮಸ್ ಅವರು ನೀಡಿದ್ದ ತಡೆ ಆದೇಶವನ್ನು ತೆರವುಗೊಳಿಸಿತು.</p><p>ಗುರುವಾರದಂದು ಚಿತ್ರ ಬಿಡುಗಡೆಗೆ 15 ದಿನಗಳ ತಡೆ ನೀಡಿದ್ದ ನ್ಯಾ. ಬೇಚು ಕುರಿಯನ್ ಪೀಠ, ಚಿತ್ರವನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ ಎಂದು ಸೆನ್ಸಾರ್ ಮಂಡಳಿಗೆ ಸೂಚಿಸಿತ್ತು.</p>.‘ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ.<p>ಗುರುವಾರವೇ ಇದರ ವಿರುದ್ಧ ಚಿತ್ರ ನಿರ್ಮಾಪಕರು ಮೇಲ್ಮನವಿ ಸಲ್ಲಿಸಿದ್ದರು. ಫೆ.27ರಂದು ಸಿನಿಮಾ ಬಿಡುಗಡೆ ಇರುವುದರಿಂದ ತ್ವರಿತ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಸಂಜೆ 7.30ಕ್ಕೆ ವಿಚಾರಣೆ ಆರಂಭಿಸಿದ ವಿಭಾಗೀಯ ಪೀಠವು ಸುಮಾರು 2 ಗಂಟೆ ವಿಸ್ತೃತ ವಿಚಾರಣೆ ನಡೆಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.</p>.ದಿ ಕೇರಳ ಸ್ಟೋರಿ: ಶಾಂತಿ, ಪ್ರೀತಿ ಉತ್ತೇಜಿಸುವ ಚಿತ್ರಗಳು ಬರಲಿ; ಪ್ರಿಯಾಂಕ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಿವಾದಿತ ‘ದಿ ಕೇರಳ ಸ್ಟೋರಿ–2’ ಚಿತ್ರ ಬಿಡುಗಡೆಗೆ ಏಕ ಸದಸ್ಯ ಪೀಠ ನೀಡಿದ್ದ ತಡೆಯನ್ನು ಕೇರಳ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿದೆ.</p>.ಟಿಕೆಟ್ ಹಣ ವಾಪಾಸ್ ಮಾಡಿ, ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಂಡ ‘ಕೇರಳ ಸ್ಟೋರಿ’.<p>ನ್ಯಾಯಮೂರ್ತಿಗಳಾದ ಎಸ್.ಎ. ಧರ್ಮಾಧಿಕಾರಿ ಹಾಗೂ ಪಿ.ವಿ ಬಾಲಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು, ನ್ಯಾಯಮೂರ್ತಿ ಬೇಚು ಕುರಿಯನ್ ಥೋಮಸ್ ಅವರು ನೀಡಿದ್ದ ತಡೆ ಆದೇಶವನ್ನು ತೆರವುಗೊಳಿಸಿತು.</p><p>ಗುರುವಾರದಂದು ಚಿತ್ರ ಬಿಡುಗಡೆಗೆ 15 ದಿನಗಳ ತಡೆ ನೀಡಿದ್ದ ನ್ಯಾ. ಬೇಚು ಕುರಿಯನ್ ಪೀಠ, ಚಿತ್ರವನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ ಎಂದು ಸೆನ್ಸಾರ್ ಮಂಡಳಿಗೆ ಸೂಚಿಸಿತ್ತು.</p>.‘ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ.<p>ಗುರುವಾರವೇ ಇದರ ವಿರುದ್ಧ ಚಿತ್ರ ನಿರ್ಮಾಪಕರು ಮೇಲ್ಮನವಿ ಸಲ್ಲಿಸಿದ್ದರು. ಫೆ.27ರಂದು ಸಿನಿಮಾ ಬಿಡುಗಡೆ ಇರುವುದರಿಂದ ತ್ವರಿತ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಸಂಜೆ 7.30ಕ್ಕೆ ವಿಚಾರಣೆ ಆರಂಭಿಸಿದ ವಿಭಾಗೀಯ ಪೀಠವು ಸುಮಾರು 2 ಗಂಟೆ ವಿಸ್ತೃತ ವಿಚಾರಣೆ ನಡೆಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.</p>.ದಿ ಕೇರಳ ಸ್ಟೋರಿ: ಶಾಂತಿ, ಪ್ರೀತಿ ಉತ್ತೇಜಿಸುವ ಚಿತ್ರಗಳು ಬರಲಿ; ಪ್ರಿಯಾಂಕ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>