<p>ಈ ಹಿಂದೆ ‘ರಾಜಹಂಸ’ ಚಿತ್ರದಲ್ಲಿ ನಟಿಸಿದ್ದ ಗೌರಿಶಂಕರ್ ಹಾಗೂ ಬಿಂದು ಶಿವರಾಂ ಜೋಡಿಯಾಗಿ ನಟಿಸಿರುವ ‘ಕೆರೆಬೇಟೆ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮಕ್ಕಳು ದೀಪಕ್ಕೆ ಎಣ್ಣೆ ಹಾಕುವ ಮೂಲಕ ಟ್ರೇಲರ್ ಬಿಡುಗಡೆಗೊಂಡಿದ್ದು ವಿಶಿಷ್ಟವಾಗಿತ್ತು.</p>.<p>ಅಂಟಿಗೆಪಿಂಟಿಗೆ ಆಚರಣೆ ಜೊತೆಗೆ ಮಲೆನಾಡಿನ ಹಲವು ವಿಶಿಷ್ಟ ಸಂಸ್ಕೃತಿಗಳು ಚಿತ್ರದಲ್ಲಿದೆ ಎಂಬುದು ಟ್ರೇಲರ್ನಿಂದ ಮೇಲ್ನೋಟಕ್ಕೆ ತಿಳಿಯುತ್ತಿದೆ. ಚಿತ್ರದಲ್ಲಿ ನಾಯಕ ಗೌರಿಶಂಕರ್ ರೈತನ ರೈತನ ಮಗನಾಗಿದ್ದು, ಕೊನೆಗೆ ಆತನೇ ಖಳನಾಯಕನಾಗಿ ಬದಲಾಗುವ ವಿಚಿತ್ರ ಕಥೆಯ ಸುಳಿವನ್ನು ಟ್ರೇಲರ್ ನೀಡುತ್ತಿದೆ. </p>.<p>ಟೀಸರ್, ಹಾಡುಗಳಿಂದ ಗಮನ ಸೆಳೆದಿರುವ ಈ ಚಿತ್ರಕ್ಕೆ ರಾಜ್ಗುರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜನಮನ ಸಂಸ್ಥೆ ನಿರ್ಮಿಸಿದ್ದು, ದಿನಕರ್ ತೂಗುದೀಪ್ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಗಗನ್ ಬದೇರಿಯ ಸಂಗೀತವಿದ್ದು, ಕೀರ್ತನ್ ಪೂಜಾರಿ ಛಾಯಾಚಿತ್ರಗ್ರಹಣವಿದೆ. ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್, ಹರಿಣಿ ಮೊದಲಾದವರು ತಾರಾಗಣದಲ್ಲಿದ್ದಾರೆ. </p>.<p>ಸಿಗಂದೂರು, ಕೋಗಾರಿನ ಕಾಡು ಸೇರಿದಂತೆ ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರ ಮಾ.15 ರಂದು ತೆರೆಗೆ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಈ ಹಿಂದೆ ‘ರಾಜಹಂಸ’ ಚಿತ್ರದಲ್ಲಿ ನಟಿಸಿದ್ದ ಗೌರಿಶಂಕರ್ ಹಾಗೂ ಬಿಂದು ಶಿವರಾಂ ಜೋಡಿಯಾಗಿ ನಟಿಸಿರುವ ‘ಕೆರೆಬೇಟೆ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮಕ್ಕಳು ದೀಪಕ್ಕೆ ಎಣ್ಣೆ ಹಾಕುವ ಮೂಲಕ ಟ್ರೇಲರ್ ಬಿಡುಗಡೆಗೊಂಡಿದ್ದು ವಿಶಿಷ್ಟವಾಗಿತ್ತು.</p>.<p>ಅಂಟಿಗೆಪಿಂಟಿಗೆ ಆಚರಣೆ ಜೊತೆಗೆ ಮಲೆನಾಡಿನ ಹಲವು ವಿಶಿಷ್ಟ ಸಂಸ್ಕೃತಿಗಳು ಚಿತ್ರದಲ್ಲಿದೆ ಎಂಬುದು ಟ್ರೇಲರ್ನಿಂದ ಮೇಲ್ನೋಟಕ್ಕೆ ತಿಳಿಯುತ್ತಿದೆ. ಚಿತ್ರದಲ್ಲಿ ನಾಯಕ ಗೌರಿಶಂಕರ್ ರೈತನ ರೈತನ ಮಗನಾಗಿದ್ದು, ಕೊನೆಗೆ ಆತನೇ ಖಳನಾಯಕನಾಗಿ ಬದಲಾಗುವ ವಿಚಿತ್ರ ಕಥೆಯ ಸುಳಿವನ್ನು ಟ್ರೇಲರ್ ನೀಡುತ್ತಿದೆ. </p>.<p>ಟೀಸರ್, ಹಾಡುಗಳಿಂದ ಗಮನ ಸೆಳೆದಿರುವ ಈ ಚಿತ್ರಕ್ಕೆ ರಾಜ್ಗುರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜನಮನ ಸಂಸ್ಥೆ ನಿರ್ಮಿಸಿದ್ದು, ದಿನಕರ್ ತೂಗುದೀಪ್ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಗಗನ್ ಬದೇರಿಯ ಸಂಗೀತವಿದ್ದು, ಕೀರ್ತನ್ ಪೂಜಾರಿ ಛಾಯಾಚಿತ್ರಗ್ರಹಣವಿದೆ. ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್, ಹರಿಣಿ ಮೊದಲಾದವರು ತಾರಾಗಣದಲ್ಲಿದ್ದಾರೆ. </p>.<p>ಸಿಗಂದೂರು, ಕೋಗಾರಿನ ಕಾಡು ಸೇರಿದಂತೆ ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರ ಮಾ.15 ರಂದು ತೆರೆಗೆ ಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>