ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಂತ್ರಸ್ತರಿಗೆ ₹ 25 ಲಕ್ಷ ನೆರವು

Last Updated 17 ಆಗಸ್ಟ್ 2019, 10:04 IST
ಅಕ್ಷರ ಗಾತ್ರ

ರಾಜ್ಯದ ವಿವಿಧೆಡೆ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ ನೆರವು ಕಲ್ಪಿಸಲು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ₹ 25 ಲಕ್ಷ ದೇಣಿಗೆ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.

ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು ಎಂದು ಅಧ್ಯಕ್ಷ ಜೈರಾಜ್‌ ತಿಳಿಸಿದ್ದಾರೆ.

ಇದೇ ವೇಳೆ 2018ನೇ ಸಾಲಿನ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ವಿವಿಧ ವಿಭಾಗದಲ್ಲಿ ಪ್ರಶಸ್ತಿ ಪಡೆದ ‘ನಾತಿಚರಾಮಿ’ ಚಿತ್ರದ ನಿರ್ದೇಶಕ ಮಂಸೋರೆ, ‘ಒಂದಲ್ಲಾ ಎರಡಲ್ಲಾ’ ಸಿನಿಮಾದ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ಪಿ.ವಿ. ರೋಹಿತ್, ನಟ ಮತ್ತು ನಿರ್ದೇಶಕ ರಿಷಬ್‍ ಶೆಟ್ಟಿ, ಕೆ.ಜಿ.ಎಫ್. ಚಿತ್ರದ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರಾದ ಅನ್ಬು ಅರಿವ್‌ ಅವರನ್ನು ಸನ್ಮಾನಿಸಲಾಯಿತು. ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ. ಗೋವಿಂದು, ಎಸ್.ಎ. ಚಿನ್ನೆಗೌಡ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT