ಇದೇ ವೇಳೆ 2018ನೇ ಸಾಲಿನ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ವಿವಿಧ ವಿಭಾಗದಲ್ಲಿ ಪ್ರಶಸ್ತಿ ಪಡೆದ ‘ನಾತಿಚರಾಮಿ’ ಚಿತ್ರದ ನಿರ್ದೇಶಕ ಮಂಸೋರೆ, ‘ಒಂದಲ್ಲಾ ಎರಡಲ್ಲಾ’ ಸಿನಿಮಾದ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ಪಿ.ವಿ. ರೋಹಿತ್, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ಕೆ.ಜಿ.ಎಫ್. ಚಿತ್ರದ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರಾದ ಅನ್ಬು ಅರಿವ್ ಅವರನ್ನು ಸನ್ಮಾನಿಸಲಾಯಿತು. ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ. ಗೋವಿಂದು, ಎಸ್.ಎ. ಚಿನ್ನೆಗೌಡ ಮತ್ತು ಪದಾಧಿಕಾರಿಗಳು ಹಾಜರಿದ್ದರು.