— Dr. Pramod Sawant (@DrPramodPSawant) May 4, 2022
ಈ ಬಗ್ಗೆ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದು, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಹಾಗೂ ಕೆಜಿಎಫ್ ಚಿತ್ರದ ತಂಡವನ್ನು ಭೇಟಿ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಹೇಳಿದ್ದಾರೆ. ಹಾಗೇ ಭೇಟಿಯ ಚಿತ್ರಗಳನ್ನು ಅವರು ಶೇರ್ ಮಾಡಿದ್ದಾರೆ.
ಯಶ್ ಹಾಗೂ ಗೋವಾ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಚಾರಗಳು ಬಹಿರಂಗವಾಗಿಲ್ಲ. ಆದಾಗ್ಯೂ ಅಭಿಮಾನಿಗಳು ಭೇಟಿಯ ಫೋಟೊಗಳನ್ನು ಶೇರ್ ಮಾಡಿಕೊಂಡು ಯಶ್ ಅವರ ಮುಂದಿನ ನಡೆಯ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ.
ಯಶ್ ರಾಜಕೀಯಕ್ಕೆ ಬರಬಹುದು ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಯಶ್ ದೊಡ್ಡ ಬಜೆಟ್ ಸಿನಿಮಾ ಮಾಡುತ್ತಿದ್ದು ಗೋವಾದಲ್ಲಿ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿರಬಹುದು ಎಂದು ಕೆಲ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.