<p>‘ಖನನ’ ಚಿತ್ರ 50 ದಿನಗಳನ್ನು ಪೂರೈಸಿದ್ದರಿಂದ ಚಿತ್ರತಂಡದಲ್ಲಿ ಉತ್ಸಾಹ ಇಮ್ಮಡಿಸಿತ್ತು. ಖುಷಿಯಿಂದಲೇ ತಂಡ ಸುದ್ದಿಗೋಷ್ಠಿಗೆ ಹಾಜರಾಗಿತ್ತು. ಪರದೆ ಮೇಲೆ ಚಿತ್ರದ ತುಣುಕುಗಳನ್ನು ತೋರಿಸಿ ಮಾತಿಗೆ ಇಳಿಯಿತು.</p>.<p>ಯುವ ನಟ ಆರ್ಯವರ್ಧನ್ ಈ ಚಿತ್ರದ ನಾಯಕ. ‘ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದರು. ಎರಡನೇ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವುದನ್ನು ಹೇಳಲು ಅವರು ಮರೆಯಲಿಲ್ಲ. ಇನ್ನೂ ಹೆಸರಿಡದ ಆ ಚಿತ್ರವನ್ನು ನಿರ್ದೇಶಿಸುತ್ತಿರುವುದು ರಾಹುಲ್ ಈರಯ್ಯ. ಒಂದು ದಶಕದಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ರಾಹುಲ್ ಅವರಿಗಿದೆ. ಒಂದೂವರೆ ವರ್ಷದಿಂದ ಅವರು ಈ ಚಿತ್ರದ ಕಥೆ ಹೆಣೆಯುತ್ತಿದ್ದಾರಂತೆ.</p>.<p>‘ಚಿತ್ರದಲ್ಲಿ ಇಬ್ಬರು ನಾಯಕರಿದ್ದಾರೆ. ಅದರಲ್ಲಿ ಆರ್ಯವರ್ಧನ್ ಕೂಡ ಒಬ್ಬರು. ಇದು ಮರ್ಡರ್ ಮಿಸ್ಟರಿ ಚಿತ್ರ. ಶೀಘ್ರವೇ, ಶೀರ್ಷಿಕೆ ಅಂತಿಮಗೊಳಿಸಲಾಗುವುದು’ ಎಂದು ವಿವರಿಸಿದರು ರಾಹುಲ್.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್, ‘ಹೊಸಬರು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಆದರೆ, ಪೂರ್ವ ತಯಾರಿ ಮಾಡಿಕೊಂಡು ಬರುತ್ತಿಲ್ಲ. ಇದರಿಂದ ನಿರ್ಮಾಪಕರು ನಷ್ಟ ಅನುಭವಿಸುವಂತಾಗಿದೆ’ ಎಂದು ವಿಷಾದಿಸಿದರು.</p>.<p>‘ಚಿತ್ರ ನಿರ್ಮಾಣಕ್ಕೂ ಮೊದಲು ಹಳೆಯ ನಿರ್ದೇಶಕರು ಮತ್ತು ನಿರ್ಮಾಪಕರೊಟ್ಟಿಗೆ ಚರ್ಚಿಸುವುದು ಒಳಿತು. ಪೋಸ್ಟರ್ಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇದರಿಂದ ಸಿನಿಮಾ ಪ್ರಚಾರಕ್ಕೆ ತೊಡಕಾಗಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ’ ಎಂದು ಭರವಸೆ ನೀಡಿದರು. ಖನನ ಚಿತ್ರದ ನಿರ್ಮಾಪಕ ಬಿ. ಶ್ರೀನಿವಾಸ್ ರಾವ್ ಮತ್ತು ನಿರ್ದೇಶಕ ರಾಧಾ ಖುಷಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಖನನ’ ಚಿತ್ರ 50 ದಿನಗಳನ್ನು ಪೂರೈಸಿದ್ದರಿಂದ ಚಿತ್ರತಂಡದಲ್ಲಿ ಉತ್ಸಾಹ ಇಮ್ಮಡಿಸಿತ್ತು. ಖುಷಿಯಿಂದಲೇ ತಂಡ ಸುದ್ದಿಗೋಷ್ಠಿಗೆ ಹಾಜರಾಗಿತ್ತು. ಪರದೆ ಮೇಲೆ ಚಿತ್ರದ ತುಣುಕುಗಳನ್ನು ತೋರಿಸಿ ಮಾತಿಗೆ ಇಳಿಯಿತು.</p>.<p>ಯುವ ನಟ ಆರ್ಯವರ್ಧನ್ ಈ ಚಿತ್ರದ ನಾಯಕ. ‘ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದಕ್ಕೆ ಸಂತಸವಾಗಿದೆ’ ಎಂದರು. ಎರಡನೇ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವುದನ್ನು ಹೇಳಲು ಅವರು ಮರೆಯಲಿಲ್ಲ. ಇನ್ನೂ ಹೆಸರಿಡದ ಆ ಚಿತ್ರವನ್ನು ನಿರ್ದೇಶಿಸುತ್ತಿರುವುದು ರಾಹುಲ್ ಈರಯ್ಯ. ಒಂದು ದಶಕದಿಂದ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ರಾಹುಲ್ ಅವರಿಗಿದೆ. ಒಂದೂವರೆ ವರ್ಷದಿಂದ ಅವರು ಈ ಚಿತ್ರದ ಕಥೆ ಹೆಣೆಯುತ್ತಿದ್ದಾರಂತೆ.</p>.<p>‘ಚಿತ್ರದಲ್ಲಿ ಇಬ್ಬರು ನಾಯಕರಿದ್ದಾರೆ. ಅದರಲ್ಲಿ ಆರ್ಯವರ್ಧನ್ ಕೂಡ ಒಬ್ಬರು. ಇದು ಮರ್ಡರ್ ಮಿಸ್ಟರಿ ಚಿತ್ರ. ಶೀಘ್ರವೇ, ಶೀರ್ಷಿಕೆ ಅಂತಿಮಗೊಳಿಸಲಾಗುವುದು’ ಎಂದು ವಿವರಿಸಿದರು ರಾಹುಲ್.</p>.<p>ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್, ‘ಹೊಸಬರು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಆದರೆ, ಪೂರ್ವ ತಯಾರಿ ಮಾಡಿಕೊಂಡು ಬರುತ್ತಿಲ್ಲ. ಇದರಿಂದ ನಿರ್ಮಾಪಕರು ನಷ್ಟ ಅನುಭವಿಸುವಂತಾಗಿದೆ’ ಎಂದು ವಿಷಾದಿಸಿದರು.</p>.<p>‘ಚಿತ್ರ ನಿರ್ಮಾಣಕ್ಕೂ ಮೊದಲು ಹಳೆಯ ನಿರ್ದೇಶಕರು ಮತ್ತು ನಿರ್ಮಾಪಕರೊಟ್ಟಿಗೆ ಚರ್ಚಿಸುವುದು ಒಳಿತು. ಪೋಸ್ಟರ್ಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇದರಿಂದ ಸಿನಿಮಾ ಪ್ರಚಾರಕ್ಕೆ ತೊಡಕಾಗಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ’ ಎಂದು ಭರವಸೆ ನೀಡಿದರು. ಖನನ ಚಿತ್ರದ ನಿರ್ಮಾಪಕ ಬಿ. ಶ್ರೀನಿವಾಸ್ ರಾವ್ ಮತ್ತು ನಿರ್ದೇಶಕ ರಾಧಾ ಖುಷಿ ಹಂಚಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>