<p>‘ಖಾರಾಬಾತ್...’ ಈ ಸಾಲನ್ನೊಳಗೊಂಡ ಹಾಡು ‘ರೂಪಾಯಿ’ ಚಿತ್ರ ಸೇರಿದೆ. ಈಗ ‘ರೂಪಾಯಿ’ಗೆ ಖಾರಾಬಾತ್ ಅನ್ನುವುದು ಸಿನಿಮಂದಿಯ ಮಾತು. ಚಿತ್ರದ ನಿರ್ದೇಶಕ, ನಾಯಕ ವಿಜಯ್ ಜಗದಾಲೆ ಬರೆದ ಹಾಡಿಗೆ ಸುಪ್ರಿಯಾ ರಾಮ್ ದನಿಯಾಗಿದ್ದಾರೆ. ಆನಂದ್ ವಿಕ್ರಮ್ರಾಜ್ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋದ ಯುಟ್ಯೂಬ್ ಚಾನೆಲ್ನಲ್ಲಿ ಈ ಹಾಡು ಬಿಡುಗಡೆಯಾಗಿದೆ. </p>.<p>ಕೃಷಿ ತಾಪಂಡ, ಚಂದನಾ ರಾಘವೇಂದ್ರ, ಮೈತ್ರಿ ಜಗದೀಶ್, ರಾಮ್ ಚಂದನ್, ಪ್ರಮೋದ್ ಶೆಟ್ಟಿ, ಅನಿಲ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರನ್ನು ಡಾಲಿ ಧನಂಜಯ ಬಿಡುಗಡೆ ಮಾಡಿದ್ದರು.</p>.<p class="Subhead">ಚಿತ್ರದಲ್ಲೇನಿರಬಹುದು?: ‘ರೂಪಾಯಿ’ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್... ಹೀಗೆ ಎಲ್ಲಾ ಅಂಶಗಳು ಇವೆ. ಫೆ. 1ರಂದು ಟ್ರೇಲರ್ ಬಿಡುಗಡೆ ಆಗಲಿದೆ. ಫೆಬ್ರವರಿ 10ರಂದು ಚಿತ್ರ ತೆರೆಗೆ ಬರಲಿದೆ ಎಂಬುದು ಚಿತ್ರತಂಡದ ಮಾಹಿತಿ.</p>.<p>ವಿವಿಧ್ ಸಿನಿಮಾಸ್ ಲಾಂಛನದಲ್ಲಿ ಮಂಜುನಾಥ್ ಎಂ., ಹರೀಶ್ ಬಿ.ಕೆ. ಮತ್ತು ವಿನೋದ್ ಎನ್. ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆರ್.ಡಿ. ನಾಗಾರ್ಜುನ ಛಾಯಾಗ್ರಹಣ ಹಾಗೂ ಶಿವರಾಜ್ ಮೇಹು ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸುನಿವಿನಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಖಾರಾಬಾತ್...’ ಈ ಸಾಲನ್ನೊಳಗೊಂಡ ಹಾಡು ‘ರೂಪಾಯಿ’ ಚಿತ್ರ ಸೇರಿದೆ. ಈಗ ‘ರೂಪಾಯಿ’ಗೆ ಖಾರಾಬಾತ್ ಅನ್ನುವುದು ಸಿನಿಮಂದಿಯ ಮಾತು. ಚಿತ್ರದ ನಿರ್ದೇಶಕ, ನಾಯಕ ವಿಜಯ್ ಜಗದಾಲೆ ಬರೆದ ಹಾಡಿಗೆ ಸುಪ್ರಿಯಾ ರಾಮ್ ದನಿಯಾಗಿದ್ದಾರೆ. ಆನಂದ್ ವಿಕ್ರಮ್ರಾಜ್ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋದ ಯುಟ್ಯೂಬ್ ಚಾನೆಲ್ನಲ್ಲಿ ಈ ಹಾಡು ಬಿಡುಗಡೆಯಾಗಿದೆ. </p>.<p>ಕೃಷಿ ತಾಪಂಡ, ಚಂದನಾ ರಾಘವೇಂದ್ರ, ಮೈತ್ರಿ ಜಗದೀಶ್, ರಾಮ್ ಚಂದನ್, ಪ್ರಮೋದ್ ಶೆಟ್ಟಿ, ಅನಿಲ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರನ್ನು ಡಾಲಿ ಧನಂಜಯ ಬಿಡುಗಡೆ ಮಾಡಿದ್ದರು.</p>.<p class="Subhead">ಚಿತ್ರದಲ್ಲೇನಿರಬಹುದು?: ‘ರೂಪಾಯಿ’ ಮಹತ್ವ ಸಾರುವ ಈ ಚಿತ್ರದಲ್ಲಿ, ಕಾಮಿಡಿ, ಸೆಂಟಿಮೆಂಟ್... ಹೀಗೆ ಎಲ್ಲಾ ಅಂಶಗಳು ಇವೆ. ಫೆ. 1ರಂದು ಟ್ರೇಲರ್ ಬಿಡುಗಡೆ ಆಗಲಿದೆ. ಫೆಬ್ರವರಿ 10ರಂದು ಚಿತ್ರ ತೆರೆಗೆ ಬರಲಿದೆ ಎಂಬುದು ಚಿತ್ರತಂಡದ ಮಾಹಿತಿ.</p>.<p>ವಿವಿಧ್ ಸಿನಿಮಾಸ್ ಲಾಂಛನದಲ್ಲಿ ಮಂಜುನಾಥ್ ಎಂ., ಹರೀಶ್ ಬಿ.ಕೆ. ಮತ್ತು ವಿನೋದ್ ಎನ್. ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆರ್.ಡಿ. ನಾಗಾರ್ಜುನ ಛಾಯಾಗ್ರಹಣ ಹಾಗೂ ಶಿವರಾಜ್ ಮೇಹು ಸಂಕಲನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸುನಿವಿನಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>