<p>ನಟ ದೇವರಾಜ್ ಅವರ ಕಿರಿಯ ಪುತ್ರ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ರಿಲೀಸ್ಗೆ ಸಜ್ಜಾಗುತ್ತಿದೆ. ಶ್ರೀಕಾಂತ್ ಹುಣಸೂರು ನಿರ್ದೇಶನದ ಈ ಸಿನಿಮಾದ ಹೊಸ ಹಾಡೊಂಡು ಬಿಡುಗಡೆಯಾಗಿದೆ. ಸಿನಿಮಾ ಆ.22ರಂದು ತೆರೆಕಾಣುತ್ತಿದೆ.</p><p>ಈ ಸಿನಿಮಾದಲ್ಲಿ ಪ್ರಣಂಗೆ ಜೋಡಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ.</p><p>‘ಮಿಡ್ ನೈಟ್ ರಸ್ತೆಯಲ್ಲಿ...’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯವಿದ್ದು, ಸಂಜಿತ್ ಹೆಗಡೆ ದನಿಯಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಹಾಡಿಗಿದೆ. ‘ನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಇದು ಎರಡನೇ ಹಾಡು. ಉಳಿದ ಎರಡು ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ’ ಎಂದಿದ್ದಾರೆ ಸಚಿನ್ ಬಸ್ರೂರ್.</p><p>‘ಈ ಚಿತ್ರ ಅಪ್ಪ-ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ–ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಾಣಸಿಯಲ್ಲಿ ನಡೆದಿದೆ’ ಎಂದಿದ್ದಾರೆ ಶ್ರೀಕಾಂತ್ ಹುಣಸೂರು.</p><p>‘ಚಿತ್ರದಲ್ಲಿ ಸಾಹಸ ಸನ್ನಿವೇಶಗಳಿಲ್ಲ. ಬಾಂಧವ್ಯದ ಕಥೆಯ ಜೊತೆಗೆ ಪ್ರೇಮಕಥೆಯೂ ಇದೆ. ರಂಗಾಯಣ ರಘು ಅವರಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಏಳೂವರೆ ವರ್ಷಗಳ ನಂತರ ನನ್ನ ಸಿನಿಮಾ ಬಿಡುಗಡೆಯಾಗುತ್ತಿದೆ’ ಎಂದರು ಪ್ರಣಂ. ಚಿತ್ರದಲ್ಲಿ ವೈದ್ಯೆಯಾಗಿ ಖುಷಿ ರವಿ ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಟ ದೇವರಾಜ್ ಅವರ ಕಿರಿಯ ಪುತ್ರ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ರಿಲೀಸ್ಗೆ ಸಜ್ಜಾಗುತ್ತಿದೆ. ಶ್ರೀಕಾಂತ್ ಹುಣಸೂರು ನಿರ್ದೇಶನದ ಈ ಸಿನಿಮಾದ ಹೊಸ ಹಾಡೊಂಡು ಬಿಡುಗಡೆಯಾಗಿದೆ. ಸಿನಿಮಾ ಆ.22ರಂದು ತೆರೆಕಾಣುತ್ತಿದೆ.</p><p>ಈ ಸಿನಿಮಾದಲ್ಲಿ ಪ್ರಣಂಗೆ ಜೋಡಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ.</p><p>‘ಮಿಡ್ ನೈಟ್ ರಸ್ತೆಯಲ್ಲಿ...’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯವಿದ್ದು, ಸಂಜಿತ್ ಹೆಗಡೆ ದನಿಯಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ಹಾಡಿಗಿದೆ. ‘ನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಇದು ಎರಡನೇ ಹಾಡು. ಉಳಿದ ಎರಡು ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ’ ಎಂದಿದ್ದಾರೆ ಸಚಿನ್ ಬಸ್ರೂರ್.</p><p>‘ಈ ಚಿತ್ರ ಅಪ್ಪ-ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ–ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಾಣಸಿಯಲ್ಲಿ ನಡೆದಿದೆ’ ಎಂದಿದ್ದಾರೆ ಶ್ರೀಕಾಂತ್ ಹುಣಸೂರು.</p><p>‘ಚಿತ್ರದಲ್ಲಿ ಸಾಹಸ ಸನ್ನಿವೇಶಗಳಿಲ್ಲ. ಬಾಂಧವ್ಯದ ಕಥೆಯ ಜೊತೆಗೆ ಪ್ರೇಮಕಥೆಯೂ ಇದೆ. ರಂಗಾಯಣ ರಘು ಅವರಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಏಳೂವರೆ ವರ್ಷಗಳ ನಂತರ ನನ್ನ ಸಿನಿಮಾ ಬಿಡುಗಡೆಯಾಗುತ್ತಿದೆ’ ಎಂದರು ಪ್ರಣಂ. ಚಿತ್ರದಲ್ಲಿ ವೈದ್ಯೆಯಾಗಿ ಖುಷಿ ರವಿ ನಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>