<p><strong>ಮುಂಬೈ</strong>: ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದಾರೆ ಎಂದು ವದಂತಿ ಎದ್ದಿತ್ತು.</p><p>ಆದರೆ, ನಟಿಯ ಆಪ್ತ ಸಹಾಯಕರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.</p><p>ಕಿಯಾರಾ ಅವರು ಬಿಡುವಿಲ್ಲದ ಕೆಲಸಗಳ ಒತ್ತಡದಿಂದ ಬಳಲಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿಯ ಮೊರೆ ಹೋಗುವಂತೆ ಸೂಚಿಸಿದ್ದಾರೆ. ಹೀಗಾಗಿ ಅವರು ವಿಶ್ರಾಂತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.</p><p>ಕಿಯಾರಾ ನಟಿಸಿರುವ ಹಾಗೂ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿರುವ ಶಂಕರ್ ನಿರ್ದೇಶನದ ಚಿತ್ರ ಇದೇ ಜನವರಿ 10ಕ್ಕೆ ಬಿಡುಗಡೆಯಾಗಲಿದೆ.</p><p>ಈ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಯಾರಾ ಗೈರಾಗಿದ್ದರು. ಹೀಗಾಗಿ ನಟಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ವದಂತಿ ಎದ್ದಿತ್ತು.</p>.#SSMB: ಸದ್ದಿಲ್ಲದೇ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದರೇ ರಾಜಮೌಳಿ?.ಹಾಲಿವುಡ್ ನಟಿಗೆ ಮೈಸೂರ್ ಸ್ಯಾಂಡಲ್ ಸೋಪ್ ಗಿಫ್ಟ್ ಕೊಟ್ಟ ಶೆಫ್ ವಿಕಾಸ್ ಖನ್ನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದಾರೆ ಎಂದು ವದಂತಿ ಎದ್ದಿತ್ತು.</p><p>ಆದರೆ, ನಟಿಯ ಆಪ್ತ ಸಹಾಯಕರು ಈ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.</p><p>ಕಿಯಾರಾ ಅವರು ಬಿಡುವಿಲ್ಲದ ಕೆಲಸಗಳ ಒತ್ತಡದಿಂದ ಬಳಲಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿಯ ಮೊರೆ ಹೋಗುವಂತೆ ಸೂಚಿಸಿದ್ದಾರೆ. ಹೀಗಾಗಿ ಅವರು ವಿಶ್ರಾಂತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.</p><p>ಕಿಯಾರಾ ನಟಿಸಿರುವ ಹಾಗೂ ರಾಮ್ ಚರಣ್ ಪ್ರಮುಖ ಪಾತ್ರದಲ್ಲಿರುವ ಶಂಕರ್ ನಿರ್ದೇಶನದ ಚಿತ್ರ ಇದೇ ಜನವರಿ 10ಕ್ಕೆ ಬಿಡುಗಡೆಯಾಗಲಿದೆ.</p><p>ಈ ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಯಾರಾ ಗೈರಾಗಿದ್ದರು. ಹೀಗಾಗಿ ನಟಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ವದಂತಿ ಎದ್ದಿತ್ತು.</p>.#SSMB: ಸದ್ದಿಲ್ಲದೇ ಹೊಸ ಚಿತ್ರಕ್ಕೆ ಮುಹೂರ್ತ ನೆರವೇರಿಸಿದರೇ ರಾಜಮೌಳಿ?.ಹಾಲಿವುಡ್ ನಟಿಗೆ ಮೈಸೂರ್ ಸ್ಯಾಂಡಲ್ ಸೋಪ್ ಗಿಫ್ಟ್ ಕೊಟ್ಟ ಶೆಫ್ ವಿಕಾಸ್ ಖನ್ನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>