'ಐ ಲವ್ ಯು' ಬಳಿಕ ಉಪೇಂದ್ರ ಮತ್ತು ನಿರ್ದೇಶಕ ಆರ್ ಚಂದ್ರು ಅವರ ಸಹಯೋಗದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಇದಾಗಿದೆ. 1940 ಮತ್ತು 1980ರ ನಡುವಿನ ಪಾತಕಲೋಕದ ಕಥೆಹಂದರವು ಚಿತ್ರದಲ್ಲಿದೆ. ಜಗಪತಿ ಬಾಬು, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ. ಅನೂಪ್ ರೇವಣ್ಣ. ಕಾಮರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.