<p>ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ನಿನ್ನೆ (ಡಿಸೆಂಬರ್ 30) ಬಿಡುಗಡೆಯಾಗಿದೆ. ಇದೀಗ ರಾಜ್ ಬಿ ಶೆಟ್ಟಿ ಹಾಗೂ ಇಡೀ ರಕ್ಕಸಪುರದೋಳ್ ಸಿನಿಮಾ ತಂಡಕ್ಕೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ.</p><p>ಈ ಬಗ್ಗೆ ನಟ ಕಿಚ್ಚ ಸುದೀಪ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ‘ರಕ್ಕಸಪುರದೋಳ್ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಇಡೀ ಚಿತ್ರ ತಂಡಕ್ಕೆ ನನ್ನ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ. </p>.ರಾಜ್ ಬಿ ಶೆಟ್ಟಿ ಹೆಸರು ಉಲ್ಲೇಖಿಸದೆ ‘45’ ಸಿನಿಮಾಗೆ ಶುಭಕೋರಿದ ರಿಷಬ್ ಶೆಟ್ಟಿ.ವಿಡಿಯೊ: 'ಸು ಫ್ರಂ ಸೋ' ಗಳಿಕೆ ಹಣವನ್ನು ನಿರ್ಮಾಪಕರಿಗೆ ನೀಡಿದ ರಾಜ್ ಬಿ. ಶೆಟ್ಟಿ.<p>ರವಿ ಸಾರಂಗ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ರಕ್ಕಸಪುರದೋಳ್’ನಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’, ‘ಟೋಬಿ’ ಸಿನಿಮಾಗಳ ಬಳಿಕ ರಾಜ್ ಬಿ ಶೆಟ್ಟಿ ಮತ್ತೆ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ ಟೀಸರ್ನಲ್ಲಿ ರಾಜ್ ಬಿ ಶೆಟ್ಟಿಯವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p><p>2026ರ ಫೆಬ್ರುವರಿ 6ರಂದು ರಕ್ಕಸಪುರದೋಳ್ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾತ್ರಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.</p>
<p>ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಚಿತ್ರದ ಟೀಸರ್ ನಿನ್ನೆ (ಡಿಸೆಂಬರ್ 30) ಬಿಡುಗಡೆಯಾಗಿದೆ. ಇದೀಗ ರಾಜ್ ಬಿ ಶೆಟ್ಟಿ ಹಾಗೂ ಇಡೀ ರಕ್ಕಸಪುರದೋಳ್ ಸಿನಿಮಾ ತಂಡಕ್ಕೆ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ.</p><p>ಈ ಬಗ್ಗೆ ನಟ ಕಿಚ್ಚ ಸುದೀಪ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ‘ರಕ್ಕಸಪುರದೋಳ್ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದೆ. ಇಡೀ ಚಿತ್ರ ತಂಡಕ್ಕೆ ನನ್ನ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ. </p>.ರಾಜ್ ಬಿ ಶೆಟ್ಟಿ ಹೆಸರು ಉಲ್ಲೇಖಿಸದೆ ‘45’ ಸಿನಿಮಾಗೆ ಶುಭಕೋರಿದ ರಿಷಬ್ ಶೆಟ್ಟಿ.ವಿಡಿಯೊ: 'ಸು ಫ್ರಂ ಸೋ' ಗಳಿಕೆ ಹಣವನ್ನು ನಿರ್ಮಾಪಕರಿಗೆ ನೀಡಿದ ರಾಜ್ ಬಿ. ಶೆಟ್ಟಿ.<p>ರವಿ ಸಾರಂಗ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ರಕ್ಕಸಪುರದೋಳ್’ನಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’, ‘ಟೋಬಿ’ ಸಿನಿಮಾಗಳ ಬಳಿಕ ರಾಜ್ ಬಿ ಶೆಟ್ಟಿ ಮತ್ತೆ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾದ ಟೀಸರ್ನಲ್ಲಿ ರಾಜ್ ಬಿ ಶೆಟ್ಟಿಯವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.</p><p>2026ರ ಫೆಬ್ರುವರಿ 6ರಂದು ರಕ್ಕಸಪುರದೋಳ್ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾತ್ರಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.</p>