<p>ಕಿಲಾಡಿ ಮಾಡುವ ಹುಡುಗಿಯ ಬದುಕಿನ ಕಥೆಯನ್ನು ಹೊಂದಿರುವ ‘ಕಿಲಾಡಿ ಮೇಘ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಿ.ಟಿ. ಮಂಜುನಾಥ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.</p>.<p>‘ಮನುಷ್ಯ ಹಣದ ಹಿಂದೆ ಹೋದಾಗ ಏನೆಲ್ಲ ಆಗುತ್ತದೆ ಎಂಬುದನ್ನು ಹಾರರ್ ಶೈಲಿಯಲ್ಲಿ ಹೇಳಿದ್ದೇನೆ. ‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ. ಆಕೆ ಮೇಘಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಶಂಕರ್ ಅಶ್ವಥ್ ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ. ಹದಿಮೂರು ವರ್ಷದ ಹುಡುಗಿಯ ಸುತ್ತ ನಡೆಯುವ ಕಥೆಯಿದು. ಮೊದಲು ಈ ಚಿತ್ರವನ್ನು ರಾಜೇಶ್ ರಾಜ ಅವರು ಆರಂಭಿಸಿದ್ದರು. ಕಾರಣಾಂತರಗಳಿಂದ ಅವರಿಗೆ ಚಿತ್ರವನ್ನು ಪೂರ್ತಿ ಮಾಡಲು ಸಾಧ್ಯವಾಗಲಿಲ್ಲ. ನಂತರ ನಾನು ಚಿತ್ರವನ್ನು ಕೈಗೆತ್ತಿಕೊಂಡು ಬಿಡುಗಡೆ ಹಂತಕ್ಕೆ ತಂದಿದ್ದೇನೆ’ ಎಂದರು ನಿರ್ದೇಶಕ.</p>.<p>ಸುಲೋಚನಾ ಪ್ರೊಡಕ್ಷನ್ಸ್ ಮೂಲಕ ಸುಲೋಚನಾ ಸುಕುಮಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ನಾನು ನಿಜವಾಗಿಯೂ ಅನುಭವಿಸಿ ಮಾಡಿದಂಥ ಪಾತ್ರವಿದು. ಯಾವುದೋ ಒಂದು ಜೀವ ತುಡಿತಕ್ಕೆ ಒಳಗಾಗಿರುತ್ತದೆ. ಅದನ್ನು ರಕ್ಷಣೆ ಮಾಡಲು ನಾನು ಬರುತ್ತೇನೆ’ ಎಂದರು ಶಂಕರ್ ಅಶ್ವಥ್.</p>.<p>ಚಿತ್ರಕ್ಕೆ ಕೆ.ಎಂ.ಇಂದ್ರ ಸಂಗೀತವಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-51-1292798494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಿಲಾಡಿ ಮಾಡುವ ಹುಡುಗಿಯ ಬದುಕಿನ ಕಥೆಯನ್ನು ಹೊಂದಿರುವ ‘ಕಿಲಾಡಿ ಮೇಘ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಿ.ಟಿ. ಮಂಜುನಾಥ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.</p>.<p>‘ಮನುಷ್ಯ ಹಣದ ಹಿಂದೆ ಹೋದಾಗ ಏನೆಲ್ಲ ಆಗುತ್ತದೆ ಎಂಬುದನ್ನು ಹಾರರ್ ಶೈಲಿಯಲ್ಲಿ ಹೇಳಿದ್ದೇನೆ. ‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ. ಆಕೆ ಮೇಘಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಶಂಕರ್ ಅಶ್ವಥ್ ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ. ಹದಿಮೂರು ವರ್ಷದ ಹುಡುಗಿಯ ಸುತ್ತ ನಡೆಯುವ ಕಥೆಯಿದು. ಮೊದಲು ಈ ಚಿತ್ರವನ್ನು ರಾಜೇಶ್ ರಾಜ ಅವರು ಆರಂಭಿಸಿದ್ದರು. ಕಾರಣಾಂತರಗಳಿಂದ ಅವರಿಗೆ ಚಿತ್ರವನ್ನು ಪೂರ್ತಿ ಮಾಡಲು ಸಾಧ್ಯವಾಗಲಿಲ್ಲ. ನಂತರ ನಾನು ಚಿತ್ರವನ್ನು ಕೈಗೆತ್ತಿಕೊಂಡು ಬಿಡುಗಡೆ ಹಂತಕ್ಕೆ ತಂದಿದ್ದೇನೆ’ ಎಂದರು ನಿರ್ದೇಶಕ.</p>.<p>ಸುಲೋಚನಾ ಪ್ರೊಡಕ್ಷನ್ಸ್ ಮೂಲಕ ಸುಲೋಚನಾ ಸುಕುಮಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ನಾನು ನಿಜವಾಗಿಯೂ ಅನುಭವಿಸಿ ಮಾಡಿದಂಥ ಪಾತ್ರವಿದು. ಯಾವುದೋ ಒಂದು ಜೀವ ತುಡಿತಕ್ಕೆ ಒಳಗಾಗಿರುತ್ತದೆ. ಅದನ್ನು ರಕ್ಷಣೆ ಮಾಡಲು ನಾನು ಬರುತ್ತೇನೆ’ ಎಂದರು ಶಂಕರ್ ಅಶ್ವಥ್.</p>.<p>ಚಿತ್ರಕ್ಕೆ ಕೆ.ಎಂ.ಇಂದ್ರ ಸಂಗೀತವಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-51-1292798494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>