<p>ಹೃದಯಾಘಾತದಿಂದ ನಿಧನರಾಗಿರುವ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಜೊತೆಗಿನ ಒಡನಾಟವನ್ನು ನಿರ್ದೇಶಕ ಕೆ.ಎಮ್ ಚೈತನ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. </p><p>ಅವರೊಂದಿಗೆ ಕಳೆದ ನೆನಪುಗಳನ್ನು ಸ್ಮರಿಸಿದ ಕೆ.ಎಮ್ ಚೈತನ್ಯ, ‘ಗೆಳೆಯ, ನಟ ದಿಲೀಪ್ ರಾಜ್ ಸುಮಾರು 25 ವರ್ಷಕ್ಕೂ ಹಿಂದಿನ ಪರಿಚಯ. 1997ರಲ್ಲಿ ನಾನು ‘ವಾಸಾಂಶಿ ಜೀರ್ಣಾನಿ‘ ಎಂಬ ನಾಟಕ ನಿರ್ದೇಶಿಸಿದ್ದೆ. ಪ್ರದರ್ಶನದ ಹಿಂದಿನ ದಿನ ಒಂದು ರಸ್ತೆ ಅಪಘಾತದಲ್ಲಿ ಆ ನಾಟಕದ ಮುಖ್ಯ ಪಾತ್ರದಲ್ಲಿದ್ದ ಅರುಣ ಎಂಬ ನಟ ತೀರಿಕೊಂಡರು. ಆ ಸಂದರ್ಭದಲ್ಲಿ ಇಡೀ ತಂಡ ಆಘಾತ, ದುಃಖದಲ್ಲಿ ಮುಳುಗಿತ್ತು. ಎರಡು ತಿಂಗಳುಗಳ ನಂತರ ಮತ್ತೆ ಆ ನಾಟಕ ಕೈಗೆಎತ್ತಿಕೊಂಡೆವು. ಆ ಸಮಯದಲ್ಲಿ ಅರುಣನ ಜಾಗ ತುಂಬಿದ್ದು ದಿಲೀಪ್. ಹವ್ಯಾಸಿ ರಂಗಭೂಮಿಯಲ್ಲಿ ಆ ಪಾತ್ರ ಅವರ ಜೀವನದಲ್ಲಿ ಪ್ರಮುಖ ಪಾತ್ರವಾಗಿತ್ತು' ಎಂದು ಹೇಳಿಕೊಂಡಿದ್ದಾರೆ. </p><p>‘2005ರಲ್ಲಿ ಇಟಿವಿ ವಾಹಿನಿಯಲ್ಲಿ ‘ಕಿಚ್ಚು‘ ಎಂಬ ಧಾರಾವಾಹಿಯನ್ನು ನಾನು ನಿರ್ಮಿಸಿ, ನಿರ್ದೇಶನ ಮಾಡಿದ್ದೆ. ಆ ಕಥೆಯಲ್ಲಿ ದಿಲೀಪ್ ಮುಖ್ಯ ಪಾತ್ರಾಧಾರಿಯಾಗಿದ್ದರು. ‘ಆ ದಿನಗಳು' ಚಿತ್ರದಲ್ಲಿ ಚೇತನ್ ನಟಿಸಿದ್ದರು, ದಿಲೀಪ್ ತನ್ನ ಧ್ವನಿ ನೀಡಿದ್ದರು. ಅಷ್ಟು ಮಾತ್ರವಲ್ಲ, ‘ಸೂರ್ಯಕಾಂತಿ‘ ಚಿತ್ರದಲ್ಲಿ ‘ಎದೆಯ ಬಾಗಿಲು ತಟ್ಟದೆ‘ ನೃತ್ಯ ಸಂಯೋಜನೆಯಲ್ಲಿ ಸಹಾಯ ಮಾಡಿದ್ದರು. ಸ್ಪುರದ್ರೂಪಿ, ಹಸನ್ಮುಖಿ, ಬಹಳ ಪ್ರತಿಭಾವಂತ ಕಲಾವಿದ ದಿಲೀಪ್ ಈಗ ನಮ್ಮನ್ನು ಅಗಲಿದ್ದಾರೆ. ಇನ್ನೂ ಸಣ್ಣ ವಯಸ್ಸು. ಅವರ ಪ್ರತಿಭೆಗೆ ಇನ್ನೂ ಹೆಚ್ಚು ಅವಕಾಶಗಳು ಅವರಿಗೆ ಸಿಗಬೇಕಿತ್ತು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೃದಯಾಘಾತದಿಂದ ನಿಧನರಾಗಿರುವ ಕನ್ನಡ ಚಿತ್ರರಂಗದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಜೊತೆಗಿನ ಒಡನಾಟವನ್ನು ನಿರ್ದೇಶಕ ಕೆ.ಎಮ್ ಚೈತನ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. </p><p>ಅವರೊಂದಿಗೆ ಕಳೆದ ನೆನಪುಗಳನ್ನು ಸ್ಮರಿಸಿದ ಕೆ.ಎಮ್ ಚೈತನ್ಯ, ‘ಗೆಳೆಯ, ನಟ ದಿಲೀಪ್ ರಾಜ್ ಸುಮಾರು 25 ವರ್ಷಕ್ಕೂ ಹಿಂದಿನ ಪರಿಚಯ. 1997ರಲ್ಲಿ ನಾನು ‘ವಾಸಾಂಶಿ ಜೀರ್ಣಾನಿ‘ ಎಂಬ ನಾಟಕ ನಿರ್ದೇಶಿಸಿದ್ದೆ. ಪ್ರದರ್ಶನದ ಹಿಂದಿನ ದಿನ ಒಂದು ರಸ್ತೆ ಅಪಘಾತದಲ್ಲಿ ಆ ನಾಟಕದ ಮುಖ್ಯ ಪಾತ್ರದಲ್ಲಿದ್ದ ಅರುಣ ಎಂಬ ನಟ ತೀರಿಕೊಂಡರು. ಆ ಸಂದರ್ಭದಲ್ಲಿ ಇಡೀ ತಂಡ ಆಘಾತ, ದುಃಖದಲ್ಲಿ ಮುಳುಗಿತ್ತು. ಎರಡು ತಿಂಗಳುಗಳ ನಂತರ ಮತ್ತೆ ಆ ನಾಟಕ ಕೈಗೆಎತ್ತಿಕೊಂಡೆವು. ಆ ಸಮಯದಲ್ಲಿ ಅರುಣನ ಜಾಗ ತುಂಬಿದ್ದು ದಿಲೀಪ್. ಹವ್ಯಾಸಿ ರಂಗಭೂಮಿಯಲ್ಲಿ ಆ ಪಾತ್ರ ಅವರ ಜೀವನದಲ್ಲಿ ಪ್ರಮುಖ ಪಾತ್ರವಾಗಿತ್ತು' ಎಂದು ಹೇಳಿಕೊಂಡಿದ್ದಾರೆ. </p><p>‘2005ರಲ್ಲಿ ಇಟಿವಿ ವಾಹಿನಿಯಲ್ಲಿ ‘ಕಿಚ್ಚು‘ ಎಂಬ ಧಾರಾವಾಹಿಯನ್ನು ನಾನು ನಿರ್ಮಿಸಿ, ನಿರ್ದೇಶನ ಮಾಡಿದ್ದೆ. ಆ ಕಥೆಯಲ್ಲಿ ದಿಲೀಪ್ ಮುಖ್ಯ ಪಾತ್ರಾಧಾರಿಯಾಗಿದ್ದರು. ‘ಆ ದಿನಗಳು' ಚಿತ್ರದಲ್ಲಿ ಚೇತನ್ ನಟಿಸಿದ್ದರು, ದಿಲೀಪ್ ತನ್ನ ಧ್ವನಿ ನೀಡಿದ್ದರು. ಅಷ್ಟು ಮಾತ್ರವಲ್ಲ, ‘ಸೂರ್ಯಕಾಂತಿ‘ ಚಿತ್ರದಲ್ಲಿ ‘ಎದೆಯ ಬಾಗಿಲು ತಟ್ಟದೆ‘ ನೃತ್ಯ ಸಂಯೋಜನೆಯಲ್ಲಿ ಸಹಾಯ ಮಾಡಿದ್ದರು. ಸ್ಪುರದ್ರೂಪಿ, ಹಸನ್ಮುಖಿ, ಬಹಳ ಪ್ರತಿಭಾವಂತ ಕಲಾವಿದ ದಿಲೀಪ್ ಈಗ ನಮ್ಮನ್ನು ಅಗಲಿದ್ದಾರೆ. ಇನ್ನೂ ಸಣ್ಣ ವಯಸ್ಸು. ಅವರ ಪ್ರತಿಭೆಗೆ ಇನ್ನೂ ಹೆಚ್ಚು ಅವಕಾಶಗಳು ಅವರಿಗೆ ಸಿಗಬೇಕಿತ್ತು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>