ಬೆಂಗಳೂರು: 'ಇತ್ತೀಚೆಗೆ ನಿಧನರಾದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವಿಶೇಷ ಗೌರವ ಸಲ್ಲಿಸಿದೆ.ತನ್ನ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್ಗಳ ಮೇಲೆ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಕೆಎಂಎಫ್ ಮುದ್ರಿಸಿದೆ'ಎಂಬ ಫೋಟೊಗಳು ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.