<p><strong>ಬೆಂಗಳೂರು</strong>: ವರ್ತೂರು ಹೋಬಳಿಯ ಕಸವನಹಳ್ಳಿ ಗ್ರಾಮದ ಜಮೀನಿನ ಒಡೆತನದ ವಿಚಾರವಾಗಿ ‘ದಿಯಾ’ ಚಿತ್ರದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿದಂತೆ ಮೂವರ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸಿನಾಪ್ಸೆ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ನ ಕೃಷ್ಣ ಚೈತನ್ಯ, ಸಚಿನ್ ನಾರಾಯಣ್ ಹಾಗೂ ಸಹಚರರು ಕಸವನಹಳ್ಳಿ ಗ್ರಾಮದ ಸರ್ವೆ ನಂಬರ್ 52ರಲ್ಲಿನ 3 ಎಕರೆ 35 ಗುಂಟೆ ಜಮೀನಿಗೆ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿಕೊಂಡು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಜಮೀನು ತಮಗೆ ಸೇರಿದ್ದು, ಕೃಷ್ಣ ಚೈತನ್ಯ ಮತ್ತು ಸಹಚರರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಮಮೂರ್ತಿ ಅವರು ಬೆಳ್ಳಂದೂರು ಠಾಣೆಗೆ ದೂರು ಕೊಟ್ಟಿದ್ದಾರೆ.</p><p>ಇದಕ್ಕೆ ಪ್ರತಿಯಾಗಿ ಕೃಷ್ಣ ಚೈತನ್ಯ ಅವರು ರಾಮಮೂರ್ತಿ, ಸತೀಶ್, ಸುನಿಲ್, ಶಿವರಾಮರೆಡ್ಡಿ, ರಾಘವೇಂದ್ರ ಮತ್ತು ಸಹಚರರ ವಿರುದ್ಧ ದೂರು ಕೊಟ್ಟಿದ್ದಾರೆ. ದೂರು ಹಾಗೂ ಪ್ರತಿದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವರ್ತೂರು ಹೋಬಳಿಯ ಕಸವನಹಳ್ಳಿ ಗ್ರಾಮದ ಜಮೀನಿನ ಒಡೆತನದ ವಿಚಾರವಾಗಿ ‘ದಿಯಾ’ ಚಿತ್ರದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿದಂತೆ ಮೂವರ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಸಿನಾಪ್ಸೆ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ನ ಕೃಷ್ಣ ಚೈತನ್ಯ, ಸಚಿನ್ ನಾರಾಯಣ್ ಹಾಗೂ ಸಹಚರರು ಕಸವನಹಳ್ಳಿ ಗ್ರಾಮದ ಸರ್ವೆ ನಂಬರ್ 52ರಲ್ಲಿನ 3 ಎಕರೆ 35 ಗುಂಟೆ ಜಮೀನಿಗೆ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿಕೊಂಡು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಜಮೀನು ತಮಗೆ ಸೇರಿದ್ದು, ಕೃಷ್ಣ ಚೈತನ್ಯ ಮತ್ತು ಸಹಚರರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಮಮೂರ್ತಿ ಅವರು ಬೆಳ್ಳಂದೂರು ಠಾಣೆಗೆ ದೂರು ಕೊಟ್ಟಿದ್ದಾರೆ.</p><p>ಇದಕ್ಕೆ ಪ್ರತಿಯಾಗಿ ಕೃಷ್ಣ ಚೈತನ್ಯ ಅವರು ರಾಮಮೂರ್ತಿ, ಸತೀಶ್, ಸುನಿಲ್, ಶಿವರಾಮರೆಡ್ಡಿ, ರಾಘವೇಂದ್ರ ಮತ್ತು ಸಹಚರರ ವಿರುದ್ಧ ದೂರು ಕೊಟ್ಟಿದ್ದಾರೆ. ದೂರು ಹಾಗೂ ಪ್ರತಿದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>