‘ಸರ್ಕಾರ ಕೂಡ ಚಿತ್ರಮಂದಿರಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ನೀಡುವ ಸಾಧ್ಯತೆಯಿದೆ. ಸರ್ಕಾರ ಏನು ನಿರ್ಧಾರ ತೆಗೆದುಕೊಳ್ಳುವುದು ನೋಡೋಣ. ಜನರ ಜೀವನವೇ ಮುಖ್ಯ. ಹೀಗಾಗಿ ಏಪ್ರಿಲ್ 22ರವರೆಗೂ ಮಾತ್ರ ಚಿತ್ರವನ್ನು ಪ್ರದರ್ಶಿಸಿ, ನಂತರ ಸ್ಥಗಿತಗೊಳಿಸಲು ತೀರ್ಮಾನಿಸಿದ್ದೇವೆ’ ಎಂದು ಚಿತ್ರದ ನಿರ್ಮಾಪಕ ಗೋವಿಂದರಾಜು ಹೇಳಿದ್ದಾರೆ.