‘ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ನಲ್ಲಿ ನಿರ್ದೇಶನದ ಕುರಿತು ತರಬೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೆ.ಡಿ ನಾಯಕನಾಗಿ, ಶ್ರದ್ಧಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ವಿನುತಾ, ನೀನಾಸಂ ಚೇತನ್ ತಾರಾಬಳಗದಲ್ಲಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾ ಶಾಲೆಯ ಪ್ರತಿಭೆಗಳು ಹೆಚ್ಚಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಒಬ್ಬ ಮನುಷ್ಯನ ಅಂತರಾಳವನ್ನು ತೆರೆದಿಡುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ಯಕ್ಷಗಾನವನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಂಡಿದ್ದೇವೆ. ಕ್ಷೇಮಗಿರಿ ಅಂದರೆ ಊರಿನ ಹೆಸರು. ಚಿತ್ರದಲ್ಲಿ ಹತ್ತು ಹಾಡುಗಳಿವೆ. ರವಿಶಂಕರ್ ಗುಂಡ್ಮಿ ಸಂಗೀತ ನೀಡಿದ್ದಾರೆ. ವಿ.ಮನೋಹರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಗೋವಿಂದರಾಜು ಈ ಚಿತ್ರದ ಛಾಯಾಗ್ರಾಹಕರು’ ಎಂದು ನಿರ್ದೇಶಕ ಜಾನ್ ಪೀಟರ್ ರಾಜಣ್ಣ ಮಾಹಿತಿ ನೀಡಿದರು.