ಹೊಸಬರೇ ಸೇರಿಕೊಂಡು ನಿರ್ಮಿಸುತ್ತಿರುವ ‘ಕ್ಷಿಪ್ರ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರತಂಡ ಕುಂಬಳ ಕಾಯಿ ಒಡೆದು ಸಂಭ್ರಮಿಸಿದೆ.
ಮಹಿಳಾ ಪ್ರಧಾನ ಕಥೆಯ ಈ ಚಿತ್ರದಲ್ಲಿ ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳೂ ಇದ್ದು, ಸತೀಶ್ ಕೃಷ್ಣ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ದಕ್ಷ್ ನಾಯಕನಾಗಿ ನಟಿಸಿದ್ದು, ‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ರಮ್ಯಪ್ರಿಯಾ ಮತ್ತು ಪ್ರೀತಿ ಮೀರಜ್ಕರ್ ನಾಯಕಿಯರಾಗಿ ಅಭಿನಯಿಸಿದ್ದಾರೆ.
ಬೆಂಗಳೂರು, ಕೋಲಾರ, ಕೆಜಿಎಫ್, ಬ್ಯಾಲಕೆರೆ ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ಡೌನ್ ವೇಳೆ ಎಡಿಟಿಂಗ್ ಮುಗಿಸಿದ್ದು, ಅನ್ಲಾಕ್ ಅವಧಿಯಲ್ಲಿ ಡಬ್ಬಿಂಗ್ ಕೂಡ ಪೂರ್ಣಗೊಳಿಸಿದೆ. ಸದ್ಯ ಧನುಷ್ ಸ್ಟುಡಿಯೊದಲ್ಲಿ ಚಿತ್ರೀಕರಣೋತ್ತರ ಕೆಲಸಗಳಲ್ಲಿ ಚಿತ್ರತಂಡ ತೊಡಗಿದೆ. ಸದ್ಯದಲ್ಲೇ ಫಸ್ಟ್ಲುಕ್ ಬಿಡುಗಡೆ ಮಾಡುವುದು ಚಿತ್ರತಂಡದ ಯೋಜನೆ.