ಇದರಲ್ಲಿ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇಡೀ ಚಿತ್ರ ಆವರಿಸಿಕೊಂಡಿದ್ದಾರೆ. ಕನ್ನಡದಲ್ಲಿ ಪೌರಾಣಿಕ ಮತ್ತು ಐತಿಹಾಸಿಕ ಸಿನಿಮಾಗಳ ಪರಂಪರೆ ಕಡಿಮೆಯಾಗುತ್ತಿರುವ ಈ ಹೊತ್ತಿನಲ್ಲಿ ಈ ಸಿನಿಮಾ ಹೊಸ ಸಂಚಲನ ಸೃಷ್ಟಿಸಿದೆ. 3ಡಿ ರೂಪದಲ್ಲಿ ತೆರೆಕಂಡಿರುವ ಈ ಚಿತ್ರಕ್ಕೆ ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.