ಈ ಚಿತ್ರ ತಮಿಳು, ತೆಲುಗು, ಮಲಯಾಳ ಭಾಷೆಗೂ ಡಬ್ ಆಗುತ್ತಿದೆ. ನಾಗಣ್ಣ ಈ ಸಿನಿಮಾ ನಿರ್ದೇಶಿಸಿದ್ದು, ಮುನಿರತ್ನ ಕಥೆ ಬರೆದಿದ್ದಾರೆ. ಜಿ.ಕೆ. ಭಾರವಿ ಸಂಭಾಷಣೆ ಬರೆದಿದ್ದಾರೆ. ಜಯನನ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ನೀಡಿದ್ದಾರೆ. ‘ಬಾಹುಬಲಿ’ ಖ್ಯಾತಿಯ ಕಿಂಗ್ ಸಾಲೋಮನ್ ಅವರ ಸಾಹಸ ಚಿತ್ರಕ್ಕಿದೆ.