<p>‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶನದ, ‘ದುನಿಯಾ’ ವಿಜಯ್ ನಟನೆಯ ಸಿನಿಮಾ ‘ಲ್ಯಾಂಡ್ಲಾರ್ಡ್’ ದಸರಾ ಅಥವಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<p>ಸಾರಥಿ ಫಿಲಂಸ್ ಬ್ಯಾನರ್ನಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ವರಮಹಾಲಕ್ಷ್ಮಿ ಹಬ್ಬದಂದು ಚಿತ್ರತಂಡ ಹೊಸ ಸುದ್ದಿ ನೀಡಿದ್ದು, ಆನಂದ್ ಆಡಿಯೊ ಕಂಪನಿ ‘ಲ್ಯಾಂಡ್ಲಾರ್ಡ್’ ಚಿತ್ರದ ಆಡಿಯೊ ಹಕ್ಕುಗಳನ್ನು ದೊಡ್ಡ ಬೆಲೆಗೆ ಖರೀದಿಸಿದೆ. ಈ ಆಲ್ಬಂ ವಿಶೇಷತೆಗಳಿಂದ ಕೂಡಿದ್ದು, ಹಿನ್ನೆಲೆ ಸಂಗೀತ ಚಿತ್ರದ ಹೈಲೈಟ್ ಎಂದಿದೆ ಚಿತ್ರತಂಡ. </p>.<p>ಚಿತ್ರದಲ್ಲಿ ವಿಜಯ್ ಅವರ ಮಗಳಾದ ರಿತಿನ್ಯ ನಟಿಸುತ್ತಿದ್ದು, ರಚಿತಾರಾಮ್ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಸ್ವತಂತ್ರ ಭೂಮಿಯ ಕಲ್ಪನೆ, ಶಿಕ್ಷಣ, ಕೂಲಿಗೆ ತಕ್ಕ ಕಾಸು ಎಂಬ ವಿಷಯಗಳ ಕುರಿತು ಚಿತ್ರ ಕಥಾಹಂದರವಿದೆ. ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಈ ಕಥೆಯಲ್ಲಿ ಅಸ್ತಿತ್ವದ ಹೋರಾಟವಿದೆ. ಸ್ವಾವಲಂಬಿಯಾಗಬೇಕು ಎನ್ನುವ ನಾಯಕನ ಯೋಚನೆ ಹೇಗೆ ಕ್ರಾಂತಿಯಾಗುತ್ತದೆ ಎನ್ನುವುದೇ ಕಥೆಯ ಜೀವಾಳ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶನದ, ‘ದುನಿಯಾ’ ವಿಜಯ್ ನಟನೆಯ ಸಿನಿಮಾ ‘ಲ್ಯಾಂಡ್ಲಾರ್ಡ್’ ದಸರಾ ಅಥವಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<p>ಸಾರಥಿ ಫಿಲಂಸ್ ಬ್ಯಾನರ್ನಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ನಡೆಯುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ವರಮಹಾಲಕ್ಷ್ಮಿ ಹಬ್ಬದಂದು ಚಿತ್ರತಂಡ ಹೊಸ ಸುದ್ದಿ ನೀಡಿದ್ದು, ಆನಂದ್ ಆಡಿಯೊ ಕಂಪನಿ ‘ಲ್ಯಾಂಡ್ಲಾರ್ಡ್’ ಚಿತ್ರದ ಆಡಿಯೊ ಹಕ್ಕುಗಳನ್ನು ದೊಡ್ಡ ಬೆಲೆಗೆ ಖರೀದಿಸಿದೆ. ಈ ಆಲ್ಬಂ ವಿಶೇಷತೆಗಳಿಂದ ಕೂಡಿದ್ದು, ಹಿನ್ನೆಲೆ ಸಂಗೀತ ಚಿತ್ರದ ಹೈಲೈಟ್ ಎಂದಿದೆ ಚಿತ್ರತಂಡ. </p>.<p>ಚಿತ್ರದಲ್ಲಿ ವಿಜಯ್ ಅವರ ಮಗಳಾದ ರಿತಿನ್ಯ ನಟಿಸುತ್ತಿದ್ದು, ರಚಿತಾರಾಮ್ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಸ್ವತಂತ್ರ ಭೂಮಿಯ ಕಲ್ಪನೆ, ಶಿಕ್ಷಣ, ಕೂಲಿಗೆ ತಕ್ಕ ಕಾಸು ಎಂಬ ವಿಷಯಗಳ ಕುರಿತು ಚಿತ್ರ ಕಥಾಹಂದರವಿದೆ. ಹಳ್ಳಿಯ ಹಿನ್ನೆಲೆಯಲ್ಲಿ ನಡೆಯುವ ಈ ಕಥೆಯಲ್ಲಿ ಅಸ್ತಿತ್ವದ ಹೋರಾಟವಿದೆ. ಸ್ವಾವಲಂಬಿಯಾಗಬೇಕು ಎನ್ನುವ ನಾಯಕನ ಯೋಚನೆ ಹೇಗೆ ಕ್ರಾಂತಿಯಾಗುತ್ತದೆ ಎನ್ನುವುದೇ ಕಥೆಯ ಜೀವಾಳ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>