ನಿರ್ದೇಶಕ ರಾಮಪ್ರಸಾದ್ ಎಂ.ಡಿ. ಮಾತನಾಡಿ, ‘ಸ್ವಲ್ಪ ದುಃಖ ಹಾಗೂ ಹೆಚ್ಚಿನ ಸಂತೋಷವನ್ನು ಹಾಡಿನ ಮೂಲಕ ಹೇಳಬೇಕೆಂದುಕೊಂಡೆ. ಗೀತರಚನೆಕಾರ ಗೌಸ್ ಪೀರ್ ಈ ಸುಂದರ ಗೀತೆ ಬರೆದುಕೊಟ್ಟರು. ಅಷ್ಟೇ ಮಧುರವಾಗಿ ಕಾರ್ತಿಕ್ ಶರ್ಮ ಈ ಹಾಡಿಗೆ ಸಂಗೀತ ನೀಡಿದ್ದಾರೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಯೋಗಿ ಹಾಗೂ ಕೃಷಿ ತಾಪಂಡ ಅದ್ಭುತವಾಗಿ ನಟಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದಂದು ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ’ ಎಂದು ಹೇಳಿದರು.